ಜನ ಮನದ ನಾಡಿ ಮಿಡಿತ

Advertisement

ನೇತ್ರಾವತಿಯಲ್ಲಿ ನೀರಿನ ಮಟ್ಟ ಹೆಚ್ಚಳ: ನದೀ ತೀರದ ಜನರಿಗೆ ಎಚ್ಚರಿಕೆ

ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ‌ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ. ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ.


ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ಎಲ್ಲಾ ಗೇಟ್ ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡಿದೆ ಎನ್ನಲಾಗಿದೆ.
ನದೀ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದೀ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ.
ಜಿಲ್ಲೆಯಲ್ಲಿ ಅಷ್ಟಾಗಿ ಮಳೆಯಿಲ್ಲದಕಾರಣ ಸಂಜೆ ವೇಳೆ ನೀರಿನ ಹರಿವು ಇಳಿಮುಖವಾಗಬಹುದು.ಆದರೆ ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಹೇಳಲಾಗಿದೆ.
ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!