ಜನ ಮನದ ನಾಡಿ ಮಿಡಿತ

Advertisement

ಉಚಿತ ಕ್ಯಾನ್ಸರ್ ಚಿಕಿತ್ಸಾ ಪರೀಕ್ಷಾ ಶಿಬಿರವನ್ನು ಪ್ರಾರಂಭಿಸಿದ ನಟ ಮೆಗಾಸ್ಟಾರ್ : ನಟನ ಕೆಲಸಕ್ಕೆ ಭಾರೀ ಮೆಚ್ಚುಗೆ!

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ನಟ ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗಳಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ಹಿರೋ ಅನ್ನೋದನ್ನ ಸಾಭಿತು ಮಾಡಿದ್ದಾರೆ. ಕಷ್ಟ ಎಂದು ಬಂದ ಅದೆಷ್ಟೋ ಜನರಿಗೆ ಚಿರಂಜೀವಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಇದೀಗ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಆರಂಭಿಸಿದ್ದಾರೆ.

ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್​ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚೆಗೆಯಷ್ಟೇ ಕ್ಯಾನ್ಸರ್​ ಸೆಂಟರ್​ ಒಂದನ್ನು ಉದ್ಘಾಟನೆ ಮಾಡಿದ್ದ ಚಿರಂಜೀವಿ ಕ್ಯಾನ್ಸರ್ ಬಗ್ಗೆ​ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಕ್ಯಾನ್ಸರ್ ತಡೆಗಟ್ಟುವುದು ಹೇಗೆ ಎಂಬುದನ್ನು ವಿವರಿಸಿದ್ದರು. ಚಿರಂಜೀವಿ ಅವರಿಗೆ ಈ ಮೊದಲು ಕ್ಯಾನ್ಸರಸ್​ ಅಲ್ಲದ ಊತ ಕಾಣಿಸಿತ್ತು. ವೈದ್ಯರ ಬಳಿ ಇದನ್ನು ತಪಾಸಣೆ ಮಾಡಿಸಲಾಯಿತು. ಒಂದೊಮ್ಮೆ ಅದನ್ನು ತೆಗೆಯದೇ ಇದ್ದಿದ್ದರೆ ಅದು ಕ್ಯಾನ್ಸರ್​ ಆಗಿ ಬದಲಾಗುವ ಸಾಧ್ಯತೆ ಇತ್ತು. ಈ ಕಾರಣದಿಂದಲೇ ಚಿರಂಜೀವಿ ಅವರು ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು.

ಎಲ್ಲರ ಬಳಿಯೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಷ್ಟು ಹಣ ಇರುವುದಿಲ್ಲ. ಈ ಕಾರಣದಿಂದಲೇ ಚಿರಂಜೀವಿ ಅವರು ಉಚಿತ ಕ್ಯಾನ್ಸರ್ ಚಿಕಿತ್ಸೆ ಪರೀಕ್ಷೆ ಶಿಬಿರ ಆರಂಭಿಸಿದ್ದಾರೆ. ಭಾನುವಾರ ಹೈದರಾಬಾದ್​ನ ಜುಬಿಲಿ ಹಿಲ್ಸ್​​ನಲ್ಲಿರುವ ಚಿರಂಜೀವಿ ಬ್ಲಡ್ ಬ್ಯಾಂಕ್‌ನಲ್ಲಿ ಕ್ಯಾನ್ಸರ್ ಪರೀಕ್ಷೆ ನಡೆದಿದ್ದು, ಚಿತ್ರರಂಗದ ಕಾರ್ಮಿಕರು, ಅಭಿಮಾನಿಗಳು ಮತ್ತು ಸಿನಿಮಾ ಪತ್ರಕರ್ತರು ಭಾಗವಹಿಸಿ ಉಚಿತ ಕ್ಯಾನ್ಸರ್ ತಪಾಸಣೆ ಪರೀಕ್ಷೆಗೆ ಒಳಗಾದರು. ಚಿರಂಜೀವಿ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ಅವರ ಸಹೋದರ ನಾಗ ಬಾಬು ಅವರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದರು.

ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್​ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!