ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ದ.ಕ. ಜಿಲ್ಲೆಯ ವ್ಯಕ್ತಿ ಬಲಿ


ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ.


ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಇರುವ ಕಾರಣದಿಂದ ಈತನನ್ನು ಅದೇ ದಿನ ಸಂಜೆ ವೇಳೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು.
ಆದರೆ ಈದಿನ ಚಿಕಿತ್ಸೆಗೆ ಸ್ಪಂದಿಸದೆ ಈತ ಕೊನೆಯುಸಿರೆಳೆದಿದ್ದಾನೆ ಎಂದು‌ಮೂಲಗಳು ತಿಳಿಸಿವೆ.
ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು.
ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದರು.
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಪತ್ನಿ ಹಾಗೂ ಎರಡು ಹೆಣ್ಮಕ್ಕಳು ಸಹಿತ ಅಪಾರ ಗೆಳೆಯರನ್ಬು ಅಗಲಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!