ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ದ.ಕ. ಜಿಲ್ಲೆಯ ವ್ಯಕ್ತಿ ಬಲಿ


ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ.


ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಇರುವ ಕಾರಣದಿಂದ ಈತನನ್ನು ಅದೇ ದಿನ ಸಂಜೆ ವೇಳೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು.
ಆದರೆ ಈದಿನ ಚಿಕಿತ್ಸೆಗೆ ಸ್ಪಂದಿಸದೆ ಈತ ಕೊನೆಯುಸಿರೆಳೆದಿದ್ದಾನೆ ಎಂದು‌ಮೂಲಗಳು ತಿಳಿಸಿವೆ.
ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು.
ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದರು.
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಪತ್ನಿ ಹಾಗೂ ಎರಡು ಹೆಣ್ಮಕ್ಕಳು ಸಹಿತ ಅಪಾರ ಗೆಳೆಯರನ್ಬು ಅಗಲಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!