ಜನ ಮನದ ನಾಡಿ ಮಿಡಿತ

Advertisement

ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಚಾಲನೆ

ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸೋಮಣ್ಣ ರವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ ಯೋಧರ ನೆನಪಿಗಾಗಿ ನಿರ್ಮಿಸಲಾಗಿದ ಯುದ್ಧ ಸ್ಮಾರಕದ ಅಭಿವೃದ್ಧಿ ಮಾಡುವ ಭಾಗ್ಯ ಈ ಭಾಗದ ಜನಪ್ರತಿನಿಧಿಗಳಿಗೆ ಸಿಕ್ಕಿರುವುದು ಪುಣ್ಯ ಕಾರ್ಯ. ಯುದ್ದ ಸ್ಮಾರಕದ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ರ 25 ಲಕ್ಷ ವಿಶೇಷ ಅನುದಾನ ಲಭಿಸಿದ್ದು, ಮನಪಾ ಉಳಿದ ಖರ್ಚು ಭರಿಸುವ ಭರವಸೆ ನೀಡಿದೆ. ಅಂತೆಯೇ ನಾನು ಕೂಡಾ ನನ್ನ ಒಂದು ತಿಂಗಳ ವೇತನವಾದ 1 ಒಂದು ಲಕ್ಷವನ್ನು ಈ ಪುಣ್ಯ ಕಾರ್ಯಕ್ಕೆ ಸಮರ್ಪಿಸುತ್ತೇನೆ ಎಂದು ಘೋಷಿಸಿದರು.

ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ ಸೈನಿಕರು ಈ ದೇಶದ ಹೆಮ್ಮೆ. ಅವರ ತ್ಯಾಗಕ್ಕೆ ಎಂದಿಗೂ ಸಾಟಿಯಿಲ್ಲ. ಅವರನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ರಮೇಶ್ ಕಂಡೆಟ್ಟು, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಕಮಲಾಕ್ಷಿ, ಕುಸುಮ ದೇವಾಡಿಗ, ಸಂದ್ಯಾ ವೆಂಕಟೇಶ್, ಕ್ಯಾ. ಗಣೇಶ್ ಕಾರ್ಣಿಕ್, ಮನಪಾ ಸದಸ್ಯರುಗಳು, ಮಾಜಿ ಸೈನಿಕ ಸಂಘದ ಅಧ್ಯಕ್ಷ ಶ್ರೀಕಾಂತ್ ಸೇರಿದಂತೆ ಬಿಜೆಪಿಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!