ಜನ ಮನದ ನಾಡಿ ಮಿಡಿತ

Advertisement

ಅಪಾಯದ ಮಟ್ಟದಲ್ಲಿ ಮೈದುಂಬಿ ಹರಿಯುತ್ತಿರುವ ನೇತ್ರಾವತಿ-ಕುಮಾರಧಾರ

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ. ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು. ಅಪಾಯದ ಮಟ್ಟದತ್ತ ಸಾಗುತ್ತಿದೆ.


ಕಳೆದ ಎರಡು ದಿನಗಳಿಂದ ನೀರಿನ ಮಟ್ಟ 20 ಮೀಟರ್ ದಾಖಲಾಗಿದ್ದು, ಬುಧವಾರ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ 28.5ಕ್ಕೆ ಏರಿದೆ. ದೇವಳದ ಅಂಗಣ ಪ್ರವೇಶಕ್ಕೆ ಕೇವಲ 10 ಮೆಟ್ಟಲುಗಳಷ್ಟೇ ಉಳಿದಿದೆ. ನೀರಿನ ಮಟ್ಟ 31.5 ಮೀಟರ್ ಗೆ ಏರಿದರೆ ಎರಡೂ ನದಿಗಳ ನೀರು ದೇವಳದ ಎರಡೂ ಭಾಗಗಳಿಂದ ಆವರಿಸಿ ಬಂದು ಸಂಗಮವಾಗುತ್ತದೆ.
ಪಶ್ಚಿಮ ಘಟ್ಟ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಬಹಳಷ್ಟು ಏರಿಕೆಯಾಗಿದೆ. ಪುತ್ತೂರು ತಾಲೂಕಿನಲ್ಲಿಯೂ ಮಳೆಯಬ್ಬರ ಹೆಚ್ಚಾಗುತ್ತಿದೆ.
ಮಳೆಗೆ ಜತೆಯಾದ ಗಾಳಿ
ಕಳೆದ ಶನಿವಾರದಿಂದ ಮಳೆಯ ಅಬ್ಬರ ಮಾತ್ರ ಕಂಡುಬರುತ್ತಿದ್ದು, ಇದೀಗ ಮಳೆಯ ಜತೆಗೆ ಗಾಳಿಯ ಅಬ್ಬರವೂ ಸೇರಿಕೊಂಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!