ಜನ ಮನದ ನಾಡಿ ಮಿಡಿತ

Advertisement

ತುಳು ಸಾಹಿತ್ಯ ಅಕಾಡೆಮಿ 30ನೇ ವರ್ಷದ ಸಂಭ್ರಮಾಚರಣೆ, ನೂತನ ಸಭಾಂಗಣ ಲೋಕಾರ್ಪಣೆ

ದಕ್ಷಿಣ ಕನ್ನಡ: ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನೆ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆ, ಸಂಸ್ಕೃತಿ ಅಧ್ಯಯನ, ದಾಖಲೀಕರಣ ಮಾಡುವ ಯೋಜನೆ ಹೊಂದಿದೆ.

ತುಳುಭವನವನ್ನು ತುಳುನಾಡಿನ ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸಲಿದ್ದೇವೆ. ಮ್ಯೂಸಿಯಂ ಆರಂಭಿಸಲಿದ್ದೇವೆ’ ಎಂದರು ಸಭಾಂಗಣವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ, ‘ಸಮಾಜದಲ್ಲಿ ಸಾಮರಸ್ಯ ತರುವ ಶಕ್ತಿ ತುಳು ಭಾಷೆಗಿದೆ. ಪಂಚದ್ರಾವಿಡ ಭಾಷೆಗಳಲ್ಲೊಂದಾದ ಈ ಭಾಷೆ ಬಗ್ಗೆ ಹೆಮ್ಮೆ ಪಡಬೇಕೇ ಹೊರತು, ಕೀಳರಿಮೆ ಸಲ್ಲದು. ತುಳು ಸಾಹಿತ್ಯದ ಏಳಿಗೆಗಾಗಿ ದುಡಿದ ಅಮೃತ ಸೋಮೇಶ್ವರ ಅವರ ಹೆಸರನ್ನು ಈ ಸಭಾಂಗಣಕ್ಕೆ ಇಟ್ಟಿರುವ ಅಕಾಡೆಮಿಯು ಅವರ ಹೆಸರನ್ನು ಜನ ಸ್ಮರಿಸುವಂತೆ ಮಾಡಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ವ್ಯಾನಿ ಅಲ್ವಾರಿಸ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ತುಳು ಸಾಹಿತಿ ಇಂದಿರಾ ಹೆಗ್ಗಡೆ, ಪ್ರಮುಖರಾದ ಎಚ್.ಎಂ. ವಾಟ್ಸನ್, ಎಂ.ದೇವದಾಸ್, ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಭಾಗವಹಿದ್ದರು.
ದುರ್ಗಾ ಪ್ರಸಾದ್ ಕುಂಬ್ರ ನಿರೂಪಿಸಿದರು. ಉದ್ಯಾವರ ನಾಗೇಶ ಕುಮಾರ್ ಸ್ವಾಗತಿಸಿದರು.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!