ಜನ ಮನದ ನಾಡಿ ಮಿಡಿತ

Advertisement

ಕೊನೆರಬೆಟ್ಟು : ಭಾರೀ ಗಾಳಿಗೆ ವಿದ್ಯುತ್‌ಕಂಬ ಗದ್ದೆಗೆ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿ ಹೋದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿದ್ದಕಟ್ಟೆ ಬಂಟರ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ ಆಯೋಜಿಸುತ್ತಿದ್ದು , ಪ್ರತೀ ವರ್ಷ ದಂತೆ ಕೆಸರು ಗದ್ದೆ ಕೂಟದ ಮೊದಲು ಕೊನೆರಬೆಟ್ಟು ಸ್ಥಳ ದೈವಗಳಿಗೆ ಪರ್ವ ನಡೆಸಿ ಪ್ರಾರ್ಥನೆ ಮಾಡುವುದು ವಾಡಿಕೆ. ಈ ಬಾರಿಯೂ ರವಿವಾರ ಕೆಸರು ಗದ್ದೆ ಕೂಟದ ಮೊದಲು ಪ್ರಾರ್ಥನೆ ಸಲ್ಲಿಸಲಾಗಿತ್ತು.ಕ್ರೀಡಾಕೂಟ ನಡೆಯುವ ಗದ್ದೆಯ ಮೇಲ್ಭಾಗದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿತ್ತು.ಇದನ್ನು ಕಂಡ ಆಯೋಜಕರು ಕ್ರೀಡಾಕೂಟದಲ್ಲಿ ವಾಲಿಬಾಲ್ ಮೊದಲಾದ ಪಂದ್ಯಾಟಗಳಿರುವ ಕಾರಣ ಕ್ರೀಡಾ ಕೂಟ ನಡೆಸುವ ದಿನ ಈ ಲೈನ್ ಸ್ಥಗಿತಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಿ ಲೈನ್ ಕಟ್ ಮಾಡಿಸಿದ್ದರು.ವಿಚಿತ್ರವೆಂದರೆ ರವಿವಾರ ಕ್ರೀಡಾ ಕೂಟ ನಡೆಯುವಾಗ ಭಾರೀ ಗಾಳಿ ಬೀಸಿ ವಿದ್ಯುತ್ ಕಂಬ ತುಂಡಾಗಿ ತಂತಿ ಸಹಿತ ಗದ್ದೆಗೆ ಬಿದ್ದಿದೆ. ಗದ್ದೆಯಲ್ಲಿ ಮಕ್ಕಳ ಸಹಿತ ಸುಮಾರು ಐನೂರರಷ್ಟು ಜನ ಸೇರಿದ್ದರು.

 

ಆದರೆ ಮೊದಲೇ ಲೈನ್ ಕಟ್ ಮಾಡಿದ್ದುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆಯೋಜಕರಿಗೆ ಜಾಗದ ದೈವ ಗಳು ಮೊದಲೇ ಸೂಚನೆ ನೀಡಿದ್ದಿರಬಹುದು. ತುಳುನಾಡಿನ ದೈವದ ಕಾರಣಿಕ ಇರುವುದಕ್ಕೆ ಇದು ಸ್ಪಷ್ಟ ನಿದರ್ಶನವೆಂದು ಆಯೋಜಕರು ತಿಳಿಸಿದ್ದಾರೆ. ಈ ಘಟನೆ ಇದೀಗ ಸಾಕಷ್ಟು ವೈರಲ್ ಆಗಿದೆ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!