ಜನ ಮನದ ನಾಡಿ ಮಿಡಿತ

Advertisement

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಅಮಾನತು

ಉಡುಪಿ: ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.


ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ನಿರ್ಮಿಸಿದ್ದು, ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105 ಲಕ್ಷಕ್ಕೆ ಆಡಳಿತ್ಮಾತಕ ಮಂಜೂರಾತಿಗೊಂಡಿದೆ. ಈ ಪೈಕಿ ರೂ.672.ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ, ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ, ಪರವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ನಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದೆ.

ಉಚ್ಚನ್ಯಾಯಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ತನಿಖೆಗೆ ಅಡ್ಡಿ ಉಂಟು ಮಾಡುವ ಅಥವಾ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇವರ ಸ್ಥಾನಕ್ಕೆ ದಿವಾಕರ ಪಿ. ಸಹಾಯಕ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಇವರನ್ನು ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಹುದ್ದೆಗೆ ಹೆಚ್ಚುವರಿ ಪ್ರಭಾರ ಆದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!