ಜನ ಮನದ ನಾಡಿ ಮಿಡಿತ

Advertisement

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಅಮಾನತು

ಉಡುಪಿ: ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.


ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ನಿರ್ಮಿಸಿದ್ದು, ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105 ಲಕ್ಷಕ್ಕೆ ಆಡಳಿತ್ಮಾತಕ ಮಂಜೂರಾತಿಗೊಂಡಿದೆ. ಈ ಪೈಕಿ ರೂ.672.ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ, ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ, ಪರವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ನಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದೆ.

ಉಚ್ಚನ್ಯಾಯಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ತನಿಖೆಗೆ ಅಡ್ಡಿ ಉಂಟು ಮಾಡುವ ಅಥವಾ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇವರ ಸ್ಥಾನಕ್ಕೆ ದಿವಾಕರ ಪಿ. ಸಹಾಯಕ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಇವರನ್ನು ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಹುದ್ದೆಗೆ ಹೆಚ್ಚುವರಿ ಪ್ರಭಾರ ಆದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!