ಜನ ಮನದ ನಾಡಿ ಮಿಡಿತ

Advertisement

ರಾ.ಶಿರೂರು ಅವರಿಗೆ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ ಗೌರವ: ಡಾ. ರವೀಶ್

 

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರನ್ನು ಶ್ರೀ ಸಿದ್ದರಾಮೇಶ್ವರ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಕನ್ನಡ ಕಲಾ ಸಂಸ್ಥೆ ಮತ್ತು ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ರವೀಶ್ (ಅಕ್ಕರ) ಅವರು ತಿಳಿಸಿರುತ್ತಾರೆ. ಶಿಕ್ಷಣ ಕ್ಷೇತ್ರ, ಶಿಕ್ಷಕ ಸಂಘಟನಾ ಕ್ಷೇತ್ರ ಮತ್ತು ಸಾಹಿತ್ಯ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಅಗಸ್ಟ್ 17ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆಯಲ್ಲಿ ನಡೆಯುವ ರಾಜ್ಯ ಮಟ್ಟದ 5ನೇ ವಿಶ್ವ ಕನ್ನಡ ಸಾಹಿತ್ಯ ಮತ್ತು ಪರಿಸರ ಜಾಗೃತಿ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಅವರು ತಿಳಿಸಿರುತ್ತಾರೆ.

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜ ಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. 1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,
19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.

ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ವಿಶ್ವ ಕನ್ನಡ ಕಲಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ರವೀಶ್ ಈ. ಅವರು ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!