ಜನ ಮನದ ನಾಡಿ ಮಿಡಿತ

Advertisement

“ಜನಮನ್ನಣೆ ಪಡೆದ ನಂದಿಕೇಶ್ವರ ತಂಡದಿಂದ ಇನ್ನಷ್ಟು ನಾಟಕ ಪ್ರದರ್ಶನಗೊಳ್ಳಲಿ” -ಲಕ್ಷ್ಮಿನಾರಾಯಣ ಅಸ್ರಣ್ಣ

ಕಿನ್ನಿಗೋಳಿ: ಶ್ರೀ ನಂದಿಕೇಶ್ವರ ನಾಟಕ ಸಂಘ ಮಂಗಳೂರು ಇದರ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ದಿ.ಪಿಬಿ ರೈ ಬೆಳ್ಳಾರೆ ಇವರ ಸವಿನೆನಪಿನಲ್ಲಿ ಮುದುಕನ ಮದುವೆ ಎಂಬ ಹಾಸ್ಯ ನಾಟಕ ಪ್ರದರ್ಶನ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜರುಗಿತು.

 


ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಆಶೀರ್ವಚನದ ನುಡಿಗಳನ್ನಾಡಿದ ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಲಕ್ಷ್ಮಿನಾರಾಯಣ ಅಸ್ರಣ್ಣ ಅವರು, “ಇದೊಂದು ವಿಶಿಷ್ಟ ಕಾರ್ಯಕ್ರಮ. ನಂದಿಕೇಶ್ವರ ನಾಟಕ ತಂಡದಲ್ಲಿ ಸಿನಿಮಾ ಕ್ಷೇತ್ರದ ಅನೇಕ ಹಿರಿಯ ಕಲಾವಿದರು ಬಣ್ಣ ಹಚ್ಚಿದ್ದಾರೆ. ಸಾವಿರಾರು ಪ್ರದರ್ಶನ ಕಂಡ ಈ ನಾಟಕಕ್ಕೆ ಇಂದಿಗೂ ಜನರ ಬೆಂಬಲ ಸಿಗುತ್ತಿರುವುದು ನೋಡಿದರೆ ಖುಷಿಯಾಗುತ್ತದೆ. ಮುಂದೆಯೂ ಈ ತಂಡದ ಮೂಲಕ ಇನ್ನಷ್ಟು ನಾಟಕ ಪ್ರದರ್ಶನಗಳು ನಡೆಯಲಿ” ಎಂದರು.ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ, “ನಾಟಕಗಳಿಗೆ ಮತ್ತು ಕಲಾವಿದರಿಗೆ ಜನರ ಪ್ರೋತ್ಸಾಹ ಬೇಕು. ಕಳೆದ 40 ವರ್ಷಗಳಿಂದ ಶ್ರೀ ನಂದಿಕೇಶ್ವರ ನಾಟಕ ಸಂಘ ಜನರನ್ನು ರಂಜಿಸುವ ಮೂಲಕ ಶ್ಲಾಘನೀಯ ಕಾರ್ಯ ಮಾಡುತ್ತಿದೆ. ಅವರಿಗೆ ಶುಭವಾಗಲಿ“ ಎಂದರು.

ವೇದಿಕೆಯಲ್ಲಿ ಯುಗಪುರುಷ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ, ನಟ ಸುಂದರ ರೈ ಮಂದಾರ, ರಾಜ್ ಸಂಪಾಜೆ, ಸಾಯಿನಾಥ್ ಮಾಸ್ಟರ್, ಶಿಲ್ಪಾ ಗೊಂಬೆ ಬಳಗದ ರಮೇಶ್ ಕಲ್ಲಡ್ಕ, ನಾಗರಾಜ್ ಆಚಾರ್ಯ, ತುಳುವೆ ಪ್ರಕಾಶ್, ವಿಕ್ರಂ ಜಾದೂಗಾರ್, ಉದ್ಯಮಿ ಗಣೇಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಕಲಾವಿದ ರಾಜ್ ಸಂಪಾಜೆ, ಭುವನಾಭಿರಾಮ ಉಡುಪ, ದೀಪಕ್ ರೈ ಪಾಣಾಜೆ ಅವರನ್ನು ಅತಿಥಿಗಳು ಸನ್ಮಾನಿಸಿದರು.ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು. ಸಾಯಿನಾಥ್ ಪ್ರಾಸ್ತಾವಿಕ ಮಾತಾಡಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!