ಜನ ಮನದ ನಾಡಿ ಮಿಡಿತ

Advertisement

ರಸ್ತೆ ಸಮಸ್ಯೆಗೆ ಸ್ಪಂದಿಸಿದ ಶಿರ್ತಾಡಿ ಗ್ರಾಮ ಪಂಚಾಯತ್, ಸದಸ್ಯರಿಗೆ ಧನ್ಯವಾದ ತಿಳಿಸಿದ ಸ್ಥಳೀಯರು

ದಕ್ಷಿಣ ಕನ್ನಡ : ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡು ಕೋಣಾಜೆ ವ್ಯಾಪ್ತಿಯ ಕುಕ್ಕುದ ಕಟ್ಟೆ ಸಮೀಪದ ಕುಂಟಲ ಹಾಗೂ ಇತರಡೆಗೆ ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯ ಪಂಚಾಯತ್ ಸದಸ್ಯರು ಮುತುವರ್ಜಿ ವಹಿಸಿ ಸಂಚಾರ ಯೋಗ್ಯ ರಸ್ತೆಯನ್ನಾಗಿ ಮಾಡಿದ್ದು ಜನರು ಸಂತೋಷ ವ್ಯಕ್ತಪಡಿಸಿದ್ದಾರೆ, ಹಾಗೂ ಸಂಬಂಧ ಪಟ್ಟವರಿಗೆ ಧನ್ಯವಾದಗಳು ತಿಳಿಸಿದ್ದಾರೆ.


ಇತ್ತೀಚೆಗೆ ಸುದ್ದಿ ಆಗಿದ್ದ ರಸ್ತೆಯ ದುಷ್ಥಿತಿಯನ್ನು ಮನಗಂಡು, ಸಮಸ್ಯೆಯ ಗಂಭೀರತೆಯನ್ನು ಅರಿತು ರಸ್ತೆ ಬದಿಯ ಚರಂಡಿ ಸರಿಪಡಿಸಿ, ಕೆಸರು ತುಂಬಿದ ರಸ್ತೆಗೆ ಜೆಲ್ಲಿ ಹಾಸಿ ಭಾರಿ ಮಳೆ ಮದ್ಯೆಯೇ ಸರಿಪಡಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಅಲ್ಲದೆ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಗಾಳಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವೆಡೆ ಸಮಸ್ಯೆಯಾಗಿದ್ದು, ಹಲವು ವಿದ್ಯುತ್ ಕಂಬಗಳು ಉರುಳಿದ್ದು, ರಸ್ತೆಗೆ ಮರ ಉರುಳಿದ್ದು, ಹೆಚ್ಚಿನ ಕಡೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಹಕಾರದೊಂದಿಗೆ, ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದ್ದು, ನಾಗರಿಕರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!