ಜನ ಮನದ ನಾಡಿ ಮಿಡಿತ

Advertisement

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿoದ ಆಟಿಡ್ ಒಂಜಿ ದಿನ*

ಒಕ್ಕಲಿಗ ಗೌಡ ಸೇವಾ ಸಂಘದ ಮಾತೃ ಸಮಿತಿ ಹಾಗೂ ಮಹಿಳಾ ಘಟಕ,ಯುವ ಘಟಕದ ಸಂಯುಕ್ತಾಶ್ರಯದಲ್ಲಿ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಶನಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಚೆಣ್ಣೆ ಮಣೆ ಆಟ, ವಿವಿಧ ತಿನಿಸುಗಳ ಸ್ಪರ್ಧೆ, ಸೋಬಾನೆ ಹಾಡು, ಅದೃಷ್ಟದ ಆಟಗಳನ್ನು ನಡೆಸಿ ತುಳುನಾಡ ಸಂಪ್ರದಾಯದ ಅನಾವರಣ ಮಾಡಲಾಯಿತು.
ಸಭಾ ಕಾರ್ಯಕ್ರಮ:
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಟಿ ಕೂಟದ ಬಗ್ಗೆ ಉಪನ್ಯಾಸ ನೀಡಿದ ಕಡಬ ಸರಸ್ವತೀ ವಿದ್ಯಾಲಯದ ಶಿಕ್ಷಕಿ ಪ್ರೇಮಲತಾ ಕೇಪುಂಜ ತುಳುನಾಡು ಸಂಸ್ಕೃತಿಯ ನೆಲೆವೆಡು, ಇಲ್ಲಿನ ಆಚಣೆಗಳು ನಮ್ಮ ಜೀವನ ಪದ್ದತಿಯಲ್ಲಿ ಹಾಸುಹೊಕ್ಕಾಗಿದ್ದು ವೈಜ್ಞಾನಿಕ ತಳಹದಿಯಲ್ಲಿ ಆಚರಿಸಲ್ಪಡುತ್ತಿದೆ, ಆಟಿ ಆಚರಣೆ ಕಷ್ಟದ ದಿನಗಳನ್ನು ನೆನೆಯುವುದು ಮಾತ್ರವಲ್ಲ ಅದನ್ನು ಖಷಿಯಿಂದ ಅನುಭವಿಸಬೇಕು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಮಾತನಾಡಿ ನಾವು ಸಂಘಟಿತರಾಗಿ ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಉಳಿಸಿಕೊಂಡು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕೆಲಸ ಮಾಡಬೆಕು , ನಮ್ಮ ಸಂಘದ ವತಿಯಿಂದ ಹೊಸಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಮುದಾಯ ಭವನದ ಕಾಮಗಾರಿಯನ್ನು ಶೀಘ್ರ ಮುಗಿಸಿಕೊಡುವಲ್ಲಿ ಸಮುದಾಯದ ಬಂಧುಗಳು ಆರ್ಥಿಕ ಸಹಕಾರ ನೀಡಬೇಕು ಎಂದರು.
ಕಡಬ ಸ್ಪಂದನಾ ಸಮುದಾಯ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಅಮೈ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ, ತಾಲೂಕು ಯುವ ಘಟಕದ ಅಧ್ಯಕ್ಷ ಪೂರ್ಣೇಶ್ ಗೌಡ ಬಾಬ್ಲುಬೆಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕೊಲ್ಲೆಸಾಗು ಸ್ವಾಗತಿಸಿದರು. ಸಂಘಟನ ಕಾರ್ಯದರ್ಶಿ ಶಾರದಾ ಕೇಶವ ಪ್ರಸ್ತಾವನೆಗೈದರು. ಕಾರ್ಯದರ್ಶಿ ಲಾವಣ್ಯ ಹೇಮಂತ್ ವಂದಿಸಿದರು. ವೇದಾ ಶಿವರಾಮ್ ಏನೆಕಲ್ ಹಾಗೂ ರೇವತಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!