ಜನ ಮನದ ನಾಡಿ ಮಿಡಿತ

Advertisement

ಸಿಟಿಬಸ್‌ ನಿರ್ವಾಹಕನ ದರೋಡೆ ; ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಬಸ್‌ ನಿಲುಗಡೆಗೊಳಿಸಿ ಮನೆಗೆ ಹೋಗುತ್ತಿದ್ದ ನಿರ್ವಾಹಕನ ಪರ್ಸ್‌ ಅನ್ನು ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಸೋಮವಾರ ತಡರಾತ್ರಿ ನಡೆದಿದ್ದು, ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೇಕಳ ಪಂಚಾಯಿತಿ ಬಳಿಯ ನಿವಾಸಿ, ಸ್ಟೇಟ್‌ ಬ್ಯಾಂಕ್‌ ಪಾವೂರು ಮಧ್ಯೆ ಚಲಿಸುವ ೫೫ ನಂಬರಿನ ಶ್ರೀ ಕಟೀಲ್‌ ಬಸ್‌ ನಿರ್ವಾಹಕ ಮಹಮ್ಮದ್‌ ಇಕ್ಬಾಲ್‌ ಎಂಬವರ ದರೋಡೆ ನಡೆದಿದೆ. ಆ.೫ ರ ಸಂಜೆ ಹರೇಕಳ ಡಿವೈ ಎಫ್‌ ಐ ಕಚೇರಿ ಸಮೀಪ ಜಾಗದಲ್ಲಿ ಬಸ್ಸನ್ನು ನಿಲ್ಲಿಸಲು ಬಂದ ಸಂದರ್ಭ ನಿರ್ವಾಹಕ ಇಕ್ಬಾಲ್‌ ಮುಂಚಿತವಾಗಿ ಇಳಿದು ಸ್ಥಳೀಯ ಅಂಗಡಿಗೆ ತೆರಳಿದ್ದರು. ಅಲ್ಲಿ ಮನೆಗೆ ಸಾಮಗ್ರಿ ಖರೀದಿಸಿ ಸಮೀಪದಲ್ಲೇ ಇರುವ ಮನೆಗೆ ಮೊಬೈಲ್‌ ಟಾರ್ಚ್‌ ಹಾಕಿಕೊಂಡು ನಡೆದುಕೊಂಡು ಹೋಗುವ ಸಂದರ್ಭ ಹಿಂದಿನಿಂದ ಬಂದ ಇಬ್ಬರು ಆಗಂತುಕರು ಕೈಗಳನ್ನು ಹಿಡಿದು, ಬಟ್ಟೆಯನ್ನು ಬಾಯಿಗೆ ತುರುಕಿ ಕೈಯ್ಯಲ್ಲಿದ್ದ ಅಂದು ದುಡಿಮೆ ನಡೆಸಿದ್ದ ರೂ.೧೩,೦೦೦ ದಷ್ಟು ನಗದು ಇದ್ದ ಪರ್ಸನ್ನು ಕಳವು ನಡೆದಿದ್ದಾರೆ. ನಿರ್ವಾಹಕ ಇಕ್ಬಾಲ್ ಬೊಬ್ಬೆ ಕೇಳಿ‌ ಸ್ಥಳೀಯರು ಹಾಗೂ ಕುಟುಂಬದವರು ಓಡಿಬಂದು , ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳರು ತಲೆಮರೆಸಿಕೊಂಡಿದ್ದಾರೆ. ಬಸ್ಸಿನಲ್ಲಿ ಇಬ್ಬರು ಯುವಕರು ನಿರ್ವಾಹಕನ ಜೊತೆ ವಾಗ್ವಾದಕ್ಕಿಳಿದಿದ್ದು, ಅದೇ ತಂಡ ಕೃತ್ಯ ಎಸಗಿರುವ ಸಾಧ್ಯತೆಯ ಮೇರೆಗೆ ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!