ಜನ ಮನದ ನಾಡಿ ಮಿಡಿತ

Advertisement

ಕರಾವಳಿಯ ಯವಕನ ವರಿಸಿದ ಬ್ರೆಝಿಲ್ ವಧು..

ಮಂಗಳೂರು: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿ ಅಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನ ಮಂಗಳೂರಿನಲ್ಲಿ ದೊರೆತಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆಯು ಆ.೯ರಂದು ನಗರದ ಟಿ. ವಿ. ರಮಣ ಪೈ ಸಭಾಂಗಣದಲ್ಲಿ ನಡೆದಿದೆ.


ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಂತೆ ನೆರವೇರಿದೆ.
ನಗರದ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್‌ಗೆ ತೆರಳಿದ್ದರು. ೨೦೧೯ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. ೨೦೨೩ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!