ಜನ ಮನದ ನಾಡಿ ಮಿಡಿತ

Advertisement

ತರುಣ್ ಸುಧೀರ್‌ ಹಾಗೂ ಸೋನಲ್ ಮಂಥೆರೊ ಅದ್ಧೂರಿ ರಿಸೆಪ್ಷನ್‌ನಲ್ಲಿ ಸ್ಟಾರ್‌ಗಳ ದಂಡು!!

ಸ್ಯಾಂಡಲ್‌ವುಡ್‌ ನಿರ್ದೇಶಕ ತರುಣ್‌ ಸುಧೀರ್‌, ಸೋನಲ್‌ ಮೊಂತೆರೋ ಜೋಡಿಯ ಅದ್ಧೂರಿ ಆರತಕ್ಷತೆಗೆ ಸ್ಯಾಂಡಲ್‌ವುಡ್‌ನ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಇಂದು (ಆಗಸ್ಟ್ 11) ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ವಿವಾಹವಾಗಿದ್ದಾರೆ.

ತರುಣ್ ಸುಧೀರ್ ಮತ್ತು ಸೋನಲ್ ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಎರಡೂ ಕುಟುಂಬಗಳನ್ನು ಒಪ್ಪಿಸಿ ಬಂಧುಗಳ, ಕುಟುಂಬದವರ ಆಶೀರ್ವಾದದೊಂದಿಗೆ ಮದುವೆ ಆಗಿದ್ದಾರೆ.

ತರುಣ್ ಸುಧೀರ್, ಕನ್ನಡದ ಖ್ಯಾತ ಖಳನಟ ಸುಧೀರ್ ಅವರ ಪುತ್ರ. ಅವರ ಸಹೋದರ ನಂದ ಕಿಶೋರ್ ಸಹ ಕನ್ನಡ ಚಿತ್ರರಂಗದ ಜನಪ್ರಿಯ ಸಿನಿಮಾ ನಿರ್ದೇಶಕ.

ಇನ್ನು ಸೋನಲ್, ಮಂಗಳೂರಿನ ಚೆಲುವೆ, ತುಳು ಸಿನಿಮಾಗಳಲ್ಲಿ ನಟಿಸುವ ಮೂಲಕ ನಟನೆಗೆ ಕಾಲಿರಿಸಿ, ಹಲವು ಜನಪ್ರಿಯ ಕನ್ನಡ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ತರುಣ್ ನಿರ್ದೇಶನದ ‘ರಾಬರ್ಟ್’ ಸಿನಿಮಾದಲ್ಲಿಯೂ ಸೋನಲ್ ನಟಿಸಿದ್ದಾರೆ.

ಕಳೆದ ವರ್ಷವೇ ಇವರ ಮದುವೆ ಆಗಬೇಕಿತ್ತಂತೆ ಹಲವು ಕಾರಣಗಳಿಂದ ಮದುವೆ ಮೂಂದೂಡುತ್ತಲೇ ಬರಲಾಗಿತ್ತು. ಈಗ ದರ್ಶನ್ ಬಂಧನ ಆಗಿರುವುದರಿಂದ ಮತ್ತೆ ಮುಂದೂಡುವ ಯೋಚನೆ ಮಾಡಲಾಗಿತ್ತಂತೆ.

ತರುಣ್ ಸುಧೀರ್ ಉತ್ತರ ಕರ್ನಾಟಕದ ಮೂಲದವರಾದರೆ ಸೋನಲ್ ಕರಾವಳಿ ಕರ್ನಾಟಕದವರು. ಇವರಿಬ್ಬರ ಮದುವೆ ಮೂಲಕ ರಾಜ್ಯದ ಎರಡು ಭಿನ್ನ ಸಂಸ್ಕೃತಿಗಳು ಜೊತೆಯಾದಂತಿವೆ.

ತರುಣ್ ಸುಧೀರ್ ಹಾಗೂ ಸೋನಲ್ ಅವರ ವಿವಾಹಕ್ಕೆ ಮಾಜಿ ಸಿಎಂ ಯಡಿಯೂರಪ್ಪ, ಚಿತ್ರರಂಗದ ಹಲವಾರು ಗಣ್ಯರು ಆಗಮಿಸಿ ನವ ವಧು-ವರರಿಗೆ ಆಶೀರ್ವಾದ ಮಾಡಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!