ಜನ ಮನದ ನಾಡಿ ಮಿಡಿತ

Advertisement

ತರುಣ್ ಸುಧೀರ್‌ ಹಾಗೂ ಸೋನಲ್ ಮಂಥೆರೊ ಅದ್ಧೂರಿ ರಿಸೆಪ್ಷನ್‌ನಲ್ಲಿ ಸ್ಟಾರ್‌ಗಳ ದಂಡು!!

ಸ್ಯಾಂಡಲ್‌ವುಡ್‌ ನಿರ್ದೇಶಕ ತರುಣ್‌ ಸುಧೀರ್‌, ಸೋನಲ್‌ ಮೊಂತೆರೋ ಜೋಡಿಯ ಅದ್ಧೂರಿ ಆರತಕ್ಷತೆಗೆ ಸ್ಯಾಂಡಲ್‌ವುಡ್‌ನ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಇಂದು (ಆಗಸ್ಟ್ 11) ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ವಿವಾಹವಾಗಿದ್ದಾರೆ.

ತರುಣ್ ಸುಧೀರ್ ಮತ್ತು ಸೋನಲ್ ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಎರಡೂ ಕುಟುಂಬಗಳನ್ನು ಒಪ್ಪಿಸಿ ಬಂಧುಗಳ, ಕುಟುಂಬದವರ ಆಶೀರ್ವಾದದೊಂದಿಗೆ ಮದುವೆ ಆಗಿದ್ದಾರೆ.

ತರುಣ್ ಸುಧೀರ್, ಕನ್ನಡದ ಖ್ಯಾತ ಖಳನಟ ಸುಧೀರ್ ಅವರ ಪುತ್ರ. ಅವರ ಸಹೋದರ ನಂದ ಕಿಶೋರ್ ಸಹ ಕನ್ನಡ ಚಿತ್ರರಂಗದ ಜನಪ್ರಿಯ ಸಿನಿಮಾ ನಿರ್ದೇಶಕ.

ಇನ್ನು ಸೋನಲ್, ಮಂಗಳೂರಿನ ಚೆಲುವೆ, ತುಳು ಸಿನಿಮಾಗಳಲ್ಲಿ ನಟಿಸುವ ಮೂಲಕ ನಟನೆಗೆ ಕಾಲಿರಿಸಿ, ಹಲವು ಜನಪ್ರಿಯ ಕನ್ನಡ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ತರುಣ್ ನಿರ್ದೇಶನದ ‘ರಾಬರ್ಟ್’ ಸಿನಿಮಾದಲ್ಲಿಯೂ ಸೋನಲ್ ನಟಿಸಿದ್ದಾರೆ.

ಕಳೆದ ವರ್ಷವೇ ಇವರ ಮದುವೆ ಆಗಬೇಕಿತ್ತಂತೆ ಹಲವು ಕಾರಣಗಳಿಂದ ಮದುವೆ ಮೂಂದೂಡುತ್ತಲೇ ಬರಲಾಗಿತ್ತು. ಈಗ ದರ್ಶನ್ ಬಂಧನ ಆಗಿರುವುದರಿಂದ ಮತ್ತೆ ಮುಂದೂಡುವ ಯೋಚನೆ ಮಾಡಲಾಗಿತ್ತಂತೆ.

ತರುಣ್ ಸುಧೀರ್ ಉತ್ತರ ಕರ್ನಾಟಕದ ಮೂಲದವರಾದರೆ ಸೋನಲ್ ಕರಾವಳಿ ಕರ್ನಾಟಕದವರು. ಇವರಿಬ್ಬರ ಮದುವೆ ಮೂಲಕ ರಾಜ್ಯದ ಎರಡು ಭಿನ್ನ ಸಂಸ್ಕೃತಿಗಳು ಜೊತೆಯಾದಂತಿವೆ.

ತರುಣ್ ಸುಧೀರ್ ಹಾಗೂ ಸೋನಲ್ ಅವರ ವಿವಾಹಕ್ಕೆ ಮಾಜಿ ಸಿಎಂ ಯಡಿಯೂರಪ್ಪ, ಚಿತ್ರರಂಗದ ಹಲವಾರು ಗಣ್ಯರು ಆಗಮಿಸಿ ನವ ವಧು-ವರರಿಗೆ ಆಶೀರ್ವಾದ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!