ಜನ ಮನದ ನಾಡಿ ಮಿಡಿತ

Advertisement

ಈ ಬಾರಿ ಶಿವಮೊಗ್ಗದಲ್ಲೂ ಕಂಬಳ: ಅ.26ರಂದು ಬೆಂಗಳೂರಿನಿಂದ ಆರಂಭ

ಮೂಡುಬಿದಿರೆ: ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯುವ ಮೂಲಕ ಈ ಬಾರಿಯ ಕಂಬಳ ಋತು ಆರಂಭವಾಗಲಿದೆ. ಬಳಿಕ ಕರಾವಳಿಯಾದ್ಯಂತ ಕಂಬಳಗಳು ನಡೆಯಲಿವೆ. ಎ.19ರಂದು ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುವ ಮೂಲಕ ಕಂಬಳ ಋತು ಮುಕ್ತಾಯವಾಗಲಿದೆ. ಜಿಲ್ಲಾ ಕಂಬಳ ಸಮಿತಿ ನೇತೃತ್ವದಲ್ಲಿ ಒಟ್ಟು 26 ಕಂಬಳಗಳು ಈ ಸಲ ನಡೆಯಲಿವೆ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಂಬಳವನ್ನು ಶಿಸ್ತುಬದ್ಧವಾಗಿ ಕಂಬಳ ನಡೆಯುತ್ತಿರುವುದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಇದನ್ನು ಮತ್ತಷ್ಟು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕಂಬಳ ಸಮಿತಿಗಳು ಪಾಲಿಸಬೇಕಾದ ಕೆಲವು ಉಪನಿಬಂಧನೆಗಳನ್ನು ರಚಿಸಲಾಗುವುದು. ಕಂಬಳ ವಿಳಂಬವಾಗುತ್ತಿರುವುದನ್ನು ನಿಯಂತ್ರಿಸಲೂ ನಿಯಮಗಳನ್ನು ರೂಪಿಸಲಾಗುವುದು. ಓಟಗಾರರು ಎಷ್ಟು ಜತೆ ಕೋಣಗಳನ್ನು ಓಡಿಸಬಹುದು ಮುಂತಾದ ನಿಯಮ ರೂಪಿಸಲಾಗುತ್ತಿದೆ ಎಂದರು.

Stage set for Bengaluru's first Kambala event in longest race track.  Details | Bengaluru - Hindustan Times

ಮತ್ತೆ ನಡೆಯಲಿದೆ ಪಿಲಿಕುಳ ಕಂಬಳ

ಪಿಲಿಕುಳ ಕಂಬಳವನ್ನು ಈ ವರ್ಷದಿಂದ ಪುನರಾರಂಭಿಸಲಾಗುವುದು. ಕಂಬಳ ವನ್ನು ಪ್ರವಾಸೋದ್ಯಮದ ಭಾಗವಾಗಿಸುವ ನಿಟ್ಟಿನಲ್ಲಿ ಕಂಬಳ ಕುರಿತ ವಸ್ತು ಪ್ರದರ್ಶನ ಸಹಿತ 4 ದಿನಗಳ “ತುಳುನಾಡ ವೈಭವ’ ಕಾರ್ಯಕ್ರಮ ಏರ್ಪಡಿಸಲಾಗುವುದು. ಬಹಳ ಮುಖ್ಯವಾಗಿ, ವಸ್ತು ಪ್ರದರ್ಶನಾಲಯ ಸಹಿತ ಕಂಬಳ ಭವನ ನಿರ್ಮಿಸಲಾಗುವುದು. ಈ ಜಿಲ್ಲೆಯಲ್ಲಿ ನಡೆಯುವ 24 ಕಂಬಳಗಳಿಗೂ ತಲಾ 5 ಲಕ್ಷ ರೂ.ಯಂತೆ ಸರಕಾರ ಅನುದಾನ ಬಿಡುಗಡೆ ಮಾಡಬೇಕೆಂಬ ಮನವಿಯನ್ನು ಕಂಬಳ ನಿಯೋಗವು ಸಿಎಂಗೆ ಸಲ್ಲಿಸಿದ್ದು, ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಕಂಬಳ ಸಮಿತಿ ಗೌರವಾಧ್ಯಕ್ಷ ಎರ್ಮಾಳ್‌ ರೋಹಿತ್‌ ಹೆಗ್ಡೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.

File:Pilikula Kambala, Mangalore.jpg - Wikimedia Commons

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!