ಜನ ಮನದ ನಾಡಿ ಮಿಡಿತ

Advertisement

ಸಹಕಾರಿ ನೌಕರರನ್ನು ಧಿಕ್ಕರಿಸೋದು ಕೇರಳ ಸರಕಾರಕ್ಕೆ ಭೂಷಣವಲ್ಲ:ಕೇರಳ ಕೋ-ಓಪರೇಟಿವ್ ಎಂಪ್ಲಾಯಿಸ್ ಕೌನ್ಸಿಲ್(AITUC)

ಮಂಜೇಶ್ವರ: ಸಹಕಾರಿ ನೌಕರರೊಂದಿಗೆ ಕೇರಳ ಸರಕಾರ ತೋರಿಸುತ್ತಿರುವ ಅವಗಣನೆ ಕೊನೆಗೊಳಿಸಬೇಕು, ನೀಡಲು ಬಾಕಿ ಇರುವ ಡಿ.ಎ ತಕ್ಷಣ ನೀಡಬೇಕು, ಹುರಿಹಗ್ಗ, ಕೈಮಗ್ಗ, ಸಹಕಾರಿ ಸಂಘಗಳನ್ನು ಸಂರಕ್ಷಿಸಬೇಕು, ಕ್ಷೀರ ಸಂಘಗಳಲ್ಲಿ ಸೆಕ್ಷನ್ 80 ಪೂರ್ಣವಾಗಿ ಜಾರಿಗೊಳಿಸಬೇಕು, ಪಿಗ್ಮಿ ಸಂಗ್ರಾಹಕರನ್ನು ಖಾಯಂ ನೌಕರರಾಗಿ ಅಂಗೀಕರಿಸಬೇಕು, ನೀಡಲು ಬಾಕಿ ಇರುವ ಪೆನ್ಶನ್ ವಿತರಣಾ ಕಮಿಷನ್ ಹಿಂದಿನ ಒಪ್ಪಿಗೆ ಪ್ರಕಾರ ನೀಡಬೇಕು, ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸೆಪ್ಟೆಂಬರ್ 14,15,16 ತಾರೀಕಿಗೆ ತಿರುವನಂತಪುರ ಸೆಕ್ರಟರಿಯೇಟ್ ಮುಂಭಾಗ ನಡೆಯಲಿರುವ 72 ಗಂಟೆಗಳ ಹೋರಾಟದ ಪೂರ್ವಭಾವಿಯಾಗಿ ಕೇರಳ ಕೋಓಪರೇಟಿವ್ ಎಂಪ್ಲಾಯಿಸ್ ಕೌನ್ಸಿಲ್(AITUC) ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ನಡೆದ ಸಮಾವೇಶವನ್ನು ಉದ್ಘಾಟಿಸಿ KCEC(AITUC)ರಾಜ್ಯಾಧ್ಯಕ್ಷರಾದ ಕಾಂ|| ವಿ.ಎಂ ಅನಿಲ್ ಮಾತನಾಡುತ್ತಿದ್ದರು. KCEC(AITUC)ಜಿಲ್ಲಾಧ್ಯಕ್ಷರಾದ ರಾಮಕೃಷ್ಣ ಕಡಂಬಾರ್ ಅಧ್ಯಕ್ಷತೆ ವಹಿಸಿದರು. KCEC(AITUC)ರಾಜ್ಯ ಕಾರ್ಯದರ್ಶಿ ಬಿ.ಸುಕುಮಾರನ್, ಸಿಪಿಐ ಜಿಲ್ಲಾ ನಿರ್ವಾಹಕ ಸಮಿತಿ ಸದಸ್ಯ ಬಿ.ವಿ ರಾಜನ್, ಜಿಲ್ಲಾ ಸಮಿತಿ ಸದಸ್ಯ ಬಿ.ವಿಜಯ ಕುಮಾರ್, ಜಯರಾಮ್ ಬಲ್ಲಂಗುಡೇಲ್, ರಾಜನ್ ನಾಯರ್, ಉಮೇಶ್ ಕುಂಜತ್ತೂರ್ ಪದವು, ಹರೀಶ್ ಕೆ.ಆರ್, ಗಂಗಾಧರ್ ಕೊಡ್ಡೆ, ಕೇಶವ ಬಾಯಿಕಟ್ಟೆ, ವಿಜಯನ್ ರಾವಣೇಶ್ವರಂ, ವಲ್ಸಲಾ ಕಾಞಂಗಾಡ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೊದಲಿಗೆ ಬಿ.ಸುಕುಮಾರನ್ ಸ್ವಾಗತಿಸಿ, ಕೊನೆಯಲ್ಲಿ ಗಂಗಾಧರ ಕೊಡ್ಡೆ ವಂದಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!