ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಕೊಲೆ

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ.

ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದಾತ. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್​ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.

ಅಪಾಯವನ್ನು ಅರಿತ ಸಮೀರ್​ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್​ನಿಂದ 500 ಮೀಟರ್​ ದೂರದಲ್ಲಿರುವ ವಿ.ಕೆ. ಫರ್ನಿಚರ್​ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದೆ. 2018 ರಲ್ಲಿ ರೌಡಿಶೀಟರ್ ಟಾರ್ಗೆಟ್​ ಇಲ್ಯಾಸ್​ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಸಮೀರ್, ರಿಯಾಝ್, ನಮೀರ್​, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್​ ಆಲಿ ಎಂಬವರು ಸೇರಿಕೊಂಡು ಕೊಲೆ ಮಾಡಿದ್ದರು.

ಪ್ರಕರಣದಲ್ಲಿ ಸಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್​ ಮತ್ತು ಸಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್​ನನ್ನು ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಸಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ.

ಕೊಲೆಯಾದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!