ಜನ ಮನದ ನಾಡಿ ಮಿಡಿತ

Advertisement

ನವಿಲು ಮಾಂಸದ ಸಾರು ತಯಾರಿಸಿ ಯೂಟ್ಯೂಬ್​ನಲ್ಲಿ ಶೇರ್​ ಮಾಡಿದ ಯೂಟ್ಯೂಬರ್ ಅರೆಸ್ಟ್!

ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.

ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಯೂಟ್ಯೂಬರ್ ಕೋಡಂ ಪ್ರಣಯ್​, ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ. ಅಷ್ಟೇ ಅಲ್ಲ, ಥಂಬ್‌ನೈಲ್​ನಲ್ಲಿ ನವಿಲು ಚಿತ್ರವನ್ನು ಹಾಕಿ ಅಪ್​ಲೋಡ್​ ಮಾಡಿದ್ದ.

ಈ ವಿಡಿಯೋ ನೋಡಿದ ನೆಟ್ಟಿಗರು ಕೋಡಂ ಪ್ರಣಯ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಯಾವಾಗ ಭಾರಿ ವಿರೋಧ ವ್ಯಕ್ತವಾಗಿದೆ ಎಂಬ ಗೊತ್ತಾಯಿತೋ ತಕ್ಷಣ ವಿಡಿಯೋವನ್ನು ಯೂಟ್ಯೂಬ್​ನಿಂದ ಪ್ರಣಯ್​ ಡಿಲೀಟ್​ ಮಾಡಿದ್ದಾರೆ. ಆದರೂ ಅಷ್ಟರಲ್ಲೇ ಈ ವಿಷಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಿದೆ. ಇದೀಗ ಪ್ರಣಯ್ ನನ್ನು ವಶಕ್ಕೆ ಪಡೆದು ಆತನಿಂದ ನವಿಲು ಗರಿ ಹಾಗೂ ಸಾಂಬರ್​ ಅನ್ನು ವಶಪಡಿಸಿಕೊಂಡಿದ್ದಾರೆ.

ಸದ್ಯ ವಶಕ್ಕೆ ಪಡೆದಿರುವುದನ್ನು ಅಧಿಕಾರಿಗಳು ಲ್ಯಾಬ್‌ಗೆ ಕಳುಹಿಸಿದ್ದಾರೆ. ಒಂದು ವೇಳೆ ಅದು ನವಿಲು ಖಾದ್ಯ ಎಂಬುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!