ಜನ ಮನದ ನಾಡಿ ಮಿಡಿತ

Advertisement

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕನ ಕೊಲೆ; ಬಿಜೆಪಿ ಕಾರ್ಪೋರೇಟರ್ ಸಹೋದರ ಸೇರಿ ಮತ್ತೆ ನಾಲ್ವರ ಬಂಧನ

ಮೈಸೂರು: ವರದಿಗಳ ಪ್ರಕಾರ, ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ತುಪ್ಪೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ದಟ್ಟಗಳ್ಳಿಯ 48 ನೇ ವಾಡ್೯ ಬಿಜೆಪಿ ಕಾರ್ಪೋರೇಟರ್ ಲಕ್ಷ್ಮಿ ಕಿರಣ್ ಸಹೋದರ ಕೊಲೆ ಆರೋಪಿ ಶಂಕರ್ ಎಂದು ಹೇಳಲಾಗುತ್ತಿದೆ.

ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರುಗಳ ನಡುವೆಯೇ ಗಲಾಟೆ ನಡೆದಿತ್ತು. ಈ ಸಂಬಂಧ ಸಂಧಾನ ಮಾಡಿಕೊಳ್ಳಲು ವೇಣುಗೋಪಾಲನನ್ನು ರವಿವಾರ ರಾತ್ರಿ ಅಗ್ನಿಶಾಮಕ ಕಚೇರಿ ಬಳಿಗೆ ಕರೆಸಿಕೊಂಡು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ದೂರು ದಾಖಲಾಗಿದ್ದು, ಸೋಮವಾರ ಸಂದೇಶ್ ಮತ್ತು ಮಣಿಕಂಠ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ನಾಲ್ವರು ಆರೋಪಿಗಳಾದ ಶಂಕರ ಅಲಿಯಾಸ್ ತುಪ್ಪ, ಅನಿಲ್, ಹ್ಯಾರಿಸ್ ಮತ್ತು ಮಂಜ ಎಂಬುವವರನ್ನು ಬಂಧಿಸಲಾಗಿದೆ ಎಂದು ಕೆಲವು ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!