ಜನ ಮನದ ನಾಡಿ ಮಿಡಿತ

Advertisement

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕನ ಕೊಲೆ; ಬಿಜೆಪಿ ಕಾರ್ಪೋರೇಟರ್ ಸಹೋದರ ಸೇರಿ ಮತ್ತೆ ನಾಲ್ವರ ಬಂಧನ

ಮೈಸೂರು: ವರದಿಗಳ ಪ್ರಕಾರ, ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ತುಪ್ಪೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ದಟ್ಟಗಳ್ಳಿಯ 48 ನೇ ವಾಡ್೯ ಬಿಜೆಪಿ ಕಾರ್ಪೋರೇಟರ್ ಲಕ್ಷ್ಮಿ ಕಿರಣ್ ಸಹೋದರ ಕೊಲೆ ಆರೋಪಿ ಶಂಕರ್ ಎಂದು ಹೇಳಲಾಗುತ್ತಿದೆ.

ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರುಗಳ ನಡುವೆಯೇ ಗಲಾಟೆ ನಡೆದಿತ್ತು. ಈ ಸಂಬಂಧ ಸಂಧಾನ ಮಾಡಿಕೊಳ್ಳಲು ವೇಣುಗೋಪಾಲನನ್ನು ರವಿವಾರ ರಾತ್ರಿ ಅಗ್ನಿಶಾಮಕ ಕಚೇರಿ ಬಳಿಗೆ ಕರೆಸಿಕೊಂಡು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ದೂರು ದಾಖಲಾಗಿದ್ದು, ಸೋಮವಾರ ಸಂದೇಶ್ ಮತ್ತು ಮಣಿಕಂಠ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ನಾಲ್ವರು ಆರೋಪಿಗಳಾದ ಶಂಕರ ಅಲಿಯಾಸ್ ತುಪ್ಪ, ಅನಿಲ್, ಹ್ಯಾರಿಸ್ ಮತ್ತು ಮಂಜ ಎಂಬುವವರನ್ನು ಬಂಧಿಸಲಾಗಿದೆ ಎಂದು ಕೆಲವು ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!