ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ:2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್‌ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್‌ ಇಸ್ಮಾಈಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್‌ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್‌ ಶರೀಫ್‌ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್‌ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್‌ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.

ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ. 6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!