ಜನ ಮನದ ನಾಡಿ ಮಿಡಿತ

Advertisement

ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ

 

ಮಂಗಳೂರು -1-9-2024: ಅಮೃತ ನಗರ ಸರ್ಕಲ್ ಹತ್ತಿರ, ವಾಮಂಜೂರು ಲಿಂಗ ಮಾರು ಗುತ್ತು ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ತಲಪಾಡಿ ಇವರಿಂದ ಉಚಿತ ವೈದ್ಯಕೀಯ ಶಿಬಿರ ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೆರವೇರಿತು. ಈ ಎಲ್ಲ ಕಾರ್ಯಕ್ರಮಗಳು ಪೌರ ಸಮಿತಿ (ರಿ) ಅಮೃತನಗರ ನಡೆಸಿಕೊಟ್ಟಿದ್ದು ರಾಜೇಶ್ ಶೆಟ್ಟಿ ಹಿರಿಯ ವಿಭಾಗಿಯ ಅಧಿಕಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಪ್ರವೀಣ್ ಚಂದ್ರ ಆಳ್ವ ತಿರುವೈಲು ಗುತ್ತು, ವಿರೋಧ ಪಕ್ಷದ ನಾಯಕರು, ಮಂಗಳೂರು ಮಹಾನಗರ ಪಾಲಿಕೆ ಹೇಮಲತಾ ರಘು ಸಾಲಿಯಾನ್ ಸದಸ್ಯರು, ತಿರುವೈಲು ವಾರ್ಡ್ , ಮಂಗಳೂರು ಮಹಾನಗರ ಪಾಲಿಕೆ ರಾಜೇಶ್ ಕೊಟ್ಟಾರಿ, ಅಧ್ಯಕ್ಷರು, ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ, ರಾಜಕುಮಾರ್ ಶೆಟ್ಟಿ , ಉಪಾಧ್ಯಕ್ಷರು, ಪೌರ ಸಮಿತಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಗಾರ್ ವಹಿಸಿದ್ದರು. ವೈದ್ಯಕೀಯ ಶಿಬಿರವನ್ನು ಡಾ. ಕಾರ್ತಿಕ್ ರೈ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ತಮ್ಮ ತಂದೆಯ ಸವಿ ನೆನಪಿಗಾಗಿ ಬಸ್ ತಂಗುದಾಣನವನ್ನು ಕೊಡುಗೆಯಾಗಿ ನೀಡಿದ ರಾಜಕುಮಾರ ಶೆಟ್ಟಿ ಅವರನ್ನು ಹಾಗೂ ಈ ಕಾರ್ಯಕ್ರಮಕ್ಕೆ ಸಹಕರಿಸಿದ ಹಲವು ಮಹನೀಯರನ್ನು ಸನ್ಮಾನಿಸಲಾಯಿತು.

 

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!