ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಬಸ್ – ಕಂಟೇನರ್ ನಡುವೆ ರಸ್ತೆ ಅಪಘಾತ, ಯುವಕ ಮೃತ್ಯು

ಕಾಸರಗೋಡು: ಟೂರಿಸ್ಟ್ ಬಸ್ ಒಂದು ಮಿನಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಮೃತಪಟ್ಟಿದ್ದಾನೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್
ನಿವಾಸಿ ಅಹ್ಮದ್ ಸಾಬಿಕ್ (27) ಮೃತಪಟ್ಟ ಯುವಕ. ಕಣ್ಣೂರು-ತಲಶೇರಿ ರಾಷ್ಟ್ರೀಯ ಹೆದ್ದಾರಿಯ ತೊಟ್ಟಡದಲ್ಲಿ ಈ ಅಪಘಾತ ನಡೆದಿದೆ. ಮೃತ ಯುವಕ ಸಾಬಿಕ್ ಕೆಲದಿನಗಳ ಹಿಂದೆಯಷ್ಟೇ ಗಲ್ಫ್‌ನಿಂದ ಊರಿಗೆ ಬಂದಿದ್ದ ಎನ್ನಲಾಗಿದೆ.

ದಾರಿಮಧ್ಯದಲ್ಲಿ ನಿಯಂತ್ರಣ ತಪ್ಪಿದ ಬಸ್ ಹಿಂಬದಿ ಕಂಟೈನರ್ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪರಿಣಾಮ ಲಾರಿ ಸಮೀಪದ ಅಂಗಡಿಗೆ ನುಗ್ಗಿದೆ. ಡಿಕ್ಕಿ ಹೊಡೆದ ಬಸ್ಸಿನ ಬದಿಯಲ್ಲಿ ಅಹ್ಮದ್ ಸಾಬಿಕ್ ಕುಳಿತಿದ್ದ. ಈ ವೇಳೆ ಬಸ್ ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಗಲ್ಸ್‌ನಿಂದ ಬಂದಿದ್ದ ಸಾಬಿಕ್, ಕೊಟ್ಟಾಯಂನಲ್ಲಿರುವ ತನ್ನ ಸ್ನೇಹಿತನ ಸಂಬಂಧಿಕರಿಗೆ ಕಳುಹಿಸಿದ್ದ ವಸ್ತುಗಳನ್ನು ನೇರವಾಗಿ ನೀಡಲು ಹೋಗುತ್ತಿದ್ದನು ಎಂದು ಮೂಲಗಳು ತಿಳಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ವಾಹನಗಳ ಚಾಲಕರು ಸೇರಿ 24 ಮಂದಿ ಗಾಯಗೊಂಡಿದ್ದಾರೆ ಹಾಗೂ ವಾಹನಗಳು ಹಾನಿಗೊಳಗಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!