ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಬಸ್ – ಕಂಟೇನರ್ ನಡುವೆ ರಸ್ತೆ ಅಪಘಾತ, ಯುವಕ ಮೃತ್ಯು

ಕಾಸರಗೋಡು: ಟೂರಿಸ್ಟ್ ಬಸ್ ಒಂದು ಮಿನಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಮೃತಪಟ್ಟಿದ್ದಾನೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್
ನಿವಾಸಿ ಅಹ್ಮದ್ ಸಾಬಿಕ್ (27) ಮೃತಪಟ್ಟ ಯುವಕ. ಕಣ್ಣೂರು-ತಲಶೇರಿ ರಾಷ್ಟ್ರೀಯ ಹೆದ್ದಾರಿಯ ತೊಟ್ಟಡದಲ್ಲಿ ಈ ಅಪಘಾತ ನಡೆದಿದೆ. ಮೃತ ಯುವಕ ಸಾಬಿಕ್ ಕೆಲದಿನಗಳ ಹಿಂದೆಯಷ್ಟೇ ಗಲ್ಫ್‌ನಿಂದ ಊರಿಗೆ ಬಂದಿದ್ದ ಎನ್ನಲಾಗಿದೆ.

ದಾರಿಮಧ್ಯದಲ್ಲಿ ನಿಯಂತ್ರಣ ತಪ್ಪಿದ ಬಸ್ ಹಿಂಬದಿ ಕಂಟೈನರ್ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪರಿಣಾಮ ಲಾರಿ ಸಮೀಪದ ಅಂಗಡಿಗೆ ನುಗ್ಗಿದೆ. ಡಿಕ್ಕಿ ಹೊಡೆದ ಬಸ್ಸಿನ ಬದಿಯಲ್ಲಿ ಅಹ್ಮದ್ ಸಾಬಿಕ್ ಕುಳಿತಿದ್ದ. ಈ ವೇಳೆ ಬಸ್ ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಗಲ್ಸ್‌ನಿಂದ ಬಂದಿದ್ದ ಸಾಬಿಕ್, ಕೊಟ್ಟಾಯಂನಲ್ಲಿರುವ ತನ್ನ ಸ್ನೇಹಿತನ ಸಂಬಂಧಿಕರಿಗೆ ಕಳುಹಿಸಿದ್ದ ವಸ್ತುಗಳನ್ನು ನೇರವಾಗಿ ನೀಡಲು ಹೋಗುತ್ತಿದ್ದನು ಎಂದು ಮೂಲಗಳು ತಿಳಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ವಾಹನಗಳ ಚಾಲಕರು ಸೇರಿ 24 ಮಂದಿ ಗಾಯಗೊಂಡಿದ್ದಾರೆ ಹಾಗೂ ವಾಹನಗಳು ಹಾನಿಗೊಳಗಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!