ಜನ ಮನದ ನಾಡಿ ಮಿಡಿತ

Advertisement

ಟ್ರ್ಯಾಕ್ ಮ್ಯಾನ್ ಸಮಯಪ್ರಜ್ಞೆ: ಉಳಿಯಿತು ನೂರಾರು ಪ್ರಯಾಣಿಕರ ಪ್ರಾಣ..!

ರೈಲ್ವೆ ಟ್ರ್ಯಾಕ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ರೈಲು ದುರಂತ ತಪ್ಪಿದದ್ದು, ನೂರಾರು ಪ್ರಯಾಣಿಕರ ಪ್ರಾಣ ಉಳಿದಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟಿತ್ತು. ಇದನ್ನು ಬುಧವಾರ ನಸುಕಿನ 4.50ರ ಸಮಯದಲ್ಲಿ ಟ್ರ್ಯಾಕ್ ಮ್ಯಾನ್ ಮಹದೇವ ಅವರು ಗಮನಿಸಿದ್ದಾರೆ. ಕೂಡಲೇ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಿರುವನಂತಪುರ-ದಿಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಲು ಕೂಡಲೇ ಕುಮಟಾ ನಿಲ್ದಾಣಕ್ಕೆ ಕರೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ರೈಲು ನಿಲ್ದಾಣದಿಂದ ಹೊರಟಿತ್ತು. ನಂತರ ಮಹಾದೇವ ರಾಜಧಾನಿ ರೈಲಿನ ಲೋಕೊ ಪೈಲಟ್ ಗೆ ಕರೆ ಮಾಡಿದರು. ಆದರೆ ಸಂಪರ್ಕ ಸಾಧ್ಯವಾಗಲಿಲ್ಲ. 8 ನಿಮಿಷದಲ್ಲಿ ರೈಲು ವೆಲ್ಡಿಂಗ್ ಬಿಟ್ಟಿದ್ದ ಸ್ಥಳಕ್ಕೆ ಬರುವುದರಲ್ಲಿತ್ತು. ತಡ ಮಾಡದ ಮಹಾದೇವ, ಹಳಿ ಮೇಲೆ ಓಡಿ ಐದು ನಿಮಿಷದಲ್ಲಿ ಅರ್ಧ ಕಿ.ಮೀ. ಕ್ರಮಿಸಿ ರೈಲಿಗೆ ನಿಲ್ಲುವಂತೆ ಸೂಚನೆ ನೀಡಿದರು. ಇದರಿಂದ ಸಂಭಾವ್ಯ ಅಪಾಯ ತಪ್ಪಿತು. ಸಿಬ್ಬಂದಿ ಹಳಿ ಜೋಡಣೆ ಬಿಟ್ಟಿದ್ದ ಸ್ಥಳದಲ್ಲಿ ವೆಲ್ಡಿಂಗ್ ಮಾಡಿದ ನಂತರ ರೈಲು ಕಾರವಾರದ ಕಡೆಗೆ ಪ್ರಯಾಣ ಬೆಳೆಸಿತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!