ಜನ ಮನದ ನಾಡಿ ಮಿಡಿತ

Advertisement

ಹುಟ್ಟೂರಿನ ಗಣೇಶೋತ್ಸವದಲ್ಲಿ ಪಾಲ್ಗೊಂಡ ನಟ ರಕ್ಷಿತ್ ಶೆಟ್ಟಿ; ವಿಡಿಯೋಗೆ ಮೆಚ್ಚುಗೆ

ಕನ್ನಡ ಚಿತ್ರರಂಗದ ಜನಪ್ರಿಯ ನಟ ರಕ್ಷಿತ್ ಶೆಟ್ಟಿ ಕುಕ್ಕಿಕಟ್ಟೆಯ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿಯ ಕುಕ್ಕಿಕಟ್ಟೆ ನಿವಾಸಿಯಾಗಿರುವ ರಕ್ಷಿತ್ ಶೆಟ್ಟಿ ತಮ್ಮ ಮೂಲ ಗ್ರಾಮವಾಗಿರುವ ಅಲೆವೂರಿನ ಕಟ್ಟೆ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥನೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.  ತವರೂರಿನ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ರಕ್ಷಿತ್ ಶೆಟ್ಟಿ ಅಲೆವೂರು ಭಾಗದಲ್ಲಿ ನಡೆಯುವ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ತಮ್ಮ ಮೂಲ ಮನೆಯ ದೈವದ ಆರಾಧನೆಯಲ್ಲೂ ಭಾಗವಹಿಸಿದ್ದರು. ಕಟ್ಟೆ ಗಣಪತಿ ಸನ್ನಿಧಾನ ಅಲೆವೂರು‌ ಭಾಗದ ಪ್ರಸಿದ್ಧ ತಾಣವಾಗಿದ್ದು, ಕಳೆದ ಐದು ದಿನಗಳಿಂದ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದೆ. ಸ್ಥಳೀಯರು ಗಣೇಶೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆಯುತ್ತಾರೆ.

 

ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ.! – Guarantee News

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!