ಜನ ಮನದ ನಾಡಿ ಮಿಡಿತ

Advertisement

ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು.

ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು. ಈ‌ ಸಾಮರಸ್ಯ ಜೀವನದಲ್ಲಿ ಇದ್ದಾಗ ಬಾಂಧವ್ಯ ಸದಾ ಗಟ್ಟಿಯಾಗಿರುತ್ತದೆ ಎಂದು ಯಕ್ಷಗುರು ಸಂಜೀವ ಸುವರ್ಣ ಅಭಿಪ್ರಾಯಪಟ್ಟರು.
ಉಡುಪಿ ಬುಡ್ನಾರ್ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಿದ “ಸಂಜೀವ-70 ಗುರು ಶಿಷ್ಯರ ಸಂವಾದ”ದಲ್ಲಿ ತಮ್ಮ ಯಕ್ಷಗಾನ ಜೀವನದ ಸಂಗತಿಗಳನ್ನು ಹಂಚಿಕೊಂಡರು.
ನನ್ನ ಹುಟ್ಟು ಹಾಗೂ ಬದುಕು ವಿಚಿತ್ರವೇ ಆಗಿದೆ. ಬೇರೆಯವರಿಂದ ಪಡೆದದ್ದೇ ಹೆಚ್ಚು ಸಮಾಜಕ್ಕೆ ನೀಡಿದ್ದು ಕಡಿಮೆ. ಸಮಾಜದಲ್ಲಿ ಕಂಡು ಕಲಿಯಬೇಕು ಹಾಗೂ ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವುದು ನನ್ನ ಅನಿಸಿಕೆ. ಯಕ್ಷಗಾನ ಕೇಂದ್ರ ಹಾಗೂ ಗುರು ಶಿವರಾಮ ಕಾರಂತರಿಂದ ದೇಶದ ಕಲೆಗಳ ಪರಿಚಯವಾಯಿತು. ಆರ್ ಎಸ್ ಎಸ್ ಬಾಲ್ಯದಿಂದ ಕಲಿಸಿದ ಸಂಸ್ಕಾರ, ನೀತಿಪಾಠ ಹಲವು ರೀತಿಯಲ್ಲಿ ಅನುಕೂಲವಾಗಿದೆ ಎಂದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಯಕ್ಷಗಾನ ಕರಾವಳಿಯ ಗಂಡುಕಲೆ. ಇದೀಗ ದೇಶವ್ಯಾಪಿ ಹಬ್ಬಿದೆ. ಸನಾತನ ಸಂಸ್ಕೃತಿ, ಆಚಾರ, ವಿಚಾರ ಯಕ್ಷಗಾನದ ಮೂಲಕ ತಿಳಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸಂಜೀವ ಸುವರ್ಣರ ಸಾಧನೆ ಶ್ಲಾಘನೀಯ ಎಂದರು. ವೈದ್ಯ ಡಾ. ಭಾಸ್ಕರಾನಂದ ಕುಮಾರ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಸಂಜೀವ ಸುವರ್ಣರ ಪತ್ನಿ ವೇದಾವತಿ ಸುವರ್ಣ ಉಪಸ್ಥಿತರಿದ್ದರು. ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸ್ವಾಗತಿಸಿದರು. ಪಶುವೈದ್ಯ ಡಾ. ಪ್ರಶಾಂತ್ ಶೆಟ್ಟಿ ನಿರೂಪಿಸಿ, ವಂದಿಸಿದರು

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!