ಜನ ಮನದ ನಾಡಿ ಮಿಡಿತ

Advertisement

ಎಲೆಕ್ಟ್ರೀಷಿಯನ್‌ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತ್ಯು..!

ಬಂಟ್ವಾಳ: ಎಲೆಕ್ಟ್ರೀಷಿಯನ್‌ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.


ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್‌ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ ಮನೆಯ ಹೊರಗಡೆಯಲ್ಲುದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದ ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರೆನ್ನಲಾಗಿದೆ.
ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

error: Content is protected !!