ಜನ ಮನದ ನಾಡಿ ಮಿಡಿತ

Advertisement

ಹನಗೋಡು ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ; ಪಿಡಿಒ ವರ್ಗಾವಣೆಗೆ ಆಗ್ರಹ…!!!!

ಹನಗೋಡು ಗ್ರಾಮ ಪಂಚಾಯಿತಿ ಪಿಡಿಒ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಅವರನ್ನು ಬೇರೇಡೆಗೆ ವರ್ಗಾಹಿಸುವಂತೆ ಆಗ್ರಹಿಸಿ ಗ್ರಾಪಂ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಸಾರ್ವಜನಿಕರೊಂದಿಗೆ ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಅಧ್ಯಕ್ಷ ಚನ್ನಯ್ಯ ಮಾತನಾಡಿ, ಪಿಡಿಒ ಅನಿತಾ ಅವರು ಇಲ್ಲಿಗೆ ಬಂದು ವರ್ಷವಾದರೂ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಹರಿಸಿಲ್ಲ, ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿಲ್ಲ, ಅಧ್ಯಕ್ಷರು, ಸದಸ್ಯರಿಗೆ ಅಗೌರವದಿಂದ ನಡೆದುಕೊಂಡು ಉಡಾಫೆ ಮಾತುಗಳನ್ನಾಡುತ್ತಾರೆ. ಇಂತಹ ಅಧಿಕಾರಿ ಯಿಂದ ಗ್ರಾಪಂನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾ ಗುತ್ತಿಲ್ಲ, ಸಾರ್ವಜನಿಕರು ದಿನನಿತ್ಯ ಕಚೇರಿಗೆ ಬಂದು ತಮ್ಮ ಕೆಲಸವಾಗದೆ ಹಿಡಿಶಾಪ ಹಾಕಿ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.

ಹನಗೋಡು ಗ್ರಾಪಂ ಪಿಡಿಒ ವಿರುದ್ಧ ಸದಸ್ಯರು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಇಒ ಹೊಂಗಯ್ಯ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ನಂತರ ಹೊಂಗಯ್ಯ ಗ್ರಾಪಂಗೆ ಭೇಟಿ ನೀಡಿ ಪ್ರತಿಭಟನಾನಿರತ ಆಡಳಿತ ಮಂಡಳಿಯವರ ಮನವೊಲಿಸಿ ಕಚೇರಿಯ ಬೀಗ ತೆರವುಗೊಳಿಸಿ ಆಡಳಿತ ಮಂಡಳಿಯವರೊಂದಿಗೆ ಪ್ರತ್ಯೇಶ್ ಸಭೆ ನಡೆಸಿದರು. ಅಧ್ಯಕ್ಷರು ಸೇರಿದಂತೆ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪಿಡಿಒಗೆ ಇಒ ಸೂಚನೆ ನೀಡಿದರು. ಇದಲ್ಲದೆ ಅಧ್ಯಕ್ಷರು ಹಾಗೂ ಸದಸ್ಯರು ನೀಡಿರುವ ಮನವಿಯನ್ನು ಕೂಡಲೇ ಜಿಪಂ ಸಿಇಒ ಗೆ ತಲುಪಿಸಲಾಗುವುದು. ಅಲ್ಲಿಯವರೆವಿಗೂ ಕಾಲಾವಕಾಶ ನೀಡಿ ಗ್ರಾ.ಪಂ.ನ ಕೆಲಸ ಕಾರ್ಯ ನಡೆಸಲು ಅವಕಾಶ ಮಾಡಿಕೊಡಿ, ನಾನು ಕೂಡ ಹನಗೋಡು ಗ್ರಾ.ಪಂ.ಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಇಒ ಭರವಸೆ ನೀಡಿದರು. ನಂತರ ಪ್ರತಿಭಟನೆಯನ್ನು ಹಿಂಪಡೆದರು.

ವೇಳೆ ತಾಲೂಕು ಪಿಡಿಒ ಸಂಘದ ಅಧ್ಯಕ್ಷ ರಾಮಣ್ಣ ಇದ್ದರು. ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ಶಿವಣ್ಣ, ಸಂತೋಷ್, ರತ್ನಶ್ರೀಧರ್, ಛಾಯಾನಾಗೇಗೌಡ, ಸಂಗೀತಾ ಸುರೇಶ್, ಪವಿತ್ರಾ, ಬೋರೇಗೌಡ, ಈಶ್ವರ್, ಮಾದೇವ ನಾಯ್ಕ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಮಾಂತರ ಪೋಲಿಸರು ಬಂದೋಬಸ್ತುವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!