ಜನ ಮನದ ನಾಡಿ ಮಿಡಿತ

Advertisement

ತೆಲುಗು ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ…

ದಕ್ಷಿಣಕನ್ನಡ: ರಿಯಾಲಿಟಿ ಶೋಗಳಲ್ಲಿ ಅತ್ಯಂತ ಹೆಚ್ಚು ಜನಮೆಚ್ಚಿದ, ಪ್ರಶಂಸೆಗೆ ಪಾತ್ರವಾಗಿರುವ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಎಂಟ್ರಿ ಕೊಡೋದು ಸುಲಭದ ಮಾತಲ್ಲ. ಚಿತ್ರರಂಗ ಮತ್ತು ಸಿರಿಯಲ್ ಕ್ಷೇತ್ರದ ಘಟಾಉಘಟಿಗಳು ಈ ಶೋ ನಲ್ಲಿ ಪಾಲ್ಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ ಅನ್ನೋದು ಸುಳ್ಳಲ್ಲ. ಇಂಥ ಫೇಮಸ್ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಯುವಕನೊಬ್ಬ ಎಂಟ್ರಿ ಕೊಟ್ಟಿದ್ದಾನೆ. ತೆಲುಗು ಬಿಗ್ ಬಾಸ್ ನ 8 ನೇ ಆವೃತ್ತಿ ಆಯ್ಕೆಯಾಗಿರುವ ಈ ಯುವಕ ಮಂಗಳೂರಿನ ಪೃಥ್ವಿ ಶೆಟ್ಟಿ. ಮೂಲತ ಮಂಗಳೂರಿನವರಾದ ಇವರು ಇದೀಗ ಬಿಗ್ ಬಾಸ್ ಶೋ ಒಳಗೆ ಎಂಟ್ರಿ ಕೊಟ್ಟು ತಮ್ಮ ಪ್ರದರ್ಶನ ನೀಡುತ್ತಿದ್ದಾರೆ.

 

ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಕಾಲೇಜು ಶಿಕ್ಷಣವನ್ನು ಮಂಗಳೂರು,ಕಾಸರಗೋಡು ಮತ್ತು‌ ಉಡುಪಿ ಜಿಲೆಯಲ್ಲಿ ಮುಗಿಸಿರುವ ಪೃಥ್ವಿ ವಿದ್ಯಾಭ್ಯಾಸದ ಬಳಿಕ ಫ್ಯಾಷನ್ ಫೀಲ್ಡ್ ಗೆ ವಾಲಿದ್ದರು. ಕಾಲೇಜು ದಿನಗಳಲ್ಲಿಯೇ ಫ್ಯಾಷನ್ ಶೋಗಳಲ್ಲಿ ಪಾಲ್ಗೊಂಡು ಯಶಸ್ಸು ಕಂಡಿದ್ದ ಪೃಥ್ವಿ ಬಳಿಕದ ದಿನಗಳಲ್ಲಿ ಚಿತ್ರರಂಗ ಮತ್ತು ಟಿವಿ ಶೋಗಳಲ್ಲಿ ಅಭಿನಯಿಸುವ ಇಚ್ಛೆಯಿಂದ ಬೆಂಗಳೂರು ಮಹಾನಗರಕ್ಕೆ ಪ್ರಯಾಣ ಬೆಳೆಸಿದ್ದರು. ಹಲವು ಸಣ್ಣ-ಪುಟ್ಟ ಧಾರಾವಾಹಿಗಳಲ್ಲಿ ನಟಿಸಿರುವ ಪೃಥ್ವಿ ಶೆಟ್ಟಿಗೆ ಉತ್ತಮ ಬ್ರೇಕ್ ದೊರೆತಿದ್ದು, ಪ್ರೀತಿಯ ಅರಸ ಮತ್ತು ಅರ್ಧಾಂಗಿ ಎನ್ನುವ ಟಿವಿ ಸೀರಿಯಲ್ ನಲ್ಲಿ. ಎರಡೂ ಧಾರಾವಾಹಿಗಳಲ್ಲಿ ತಮ್ಮ ಸಾಧನೆ ತೋರಿರುವ ಪೃಥ್ವಿ ಗೆ ಬಳಿಕದ ದಿನಗಳಲ್ಲಿ ತೆಲುಗು ಭಾಷೆಯ ಮೆಗಾ ಧಾರಾವಾಹಿಗಳಲ್ಲೂ ಅವಕಾಶ ದೊರೆತಿದೆ.ತೆಲುಗಿನ ಸೂಪರ್ ಹಿಟ್ ಧಾರಾವಾಹಿಯಾದ ನಾಗಪಂಚಮಿಯಲ್ಲಿನ ನಟನೆಗೆ ಪೃಥ್ವಿ ಶೆಟ್ಟಿ ಮನೆ ಮಾತಾಗಿದ್ದಾರೆ. ಈಗಾಗಲೇ ಎರಡು ತೆಲುಗು ಚಿತ್ರಗಳಲ್ಲಿ ನಟಿಸಿರುವ ಪೃಥ್ವಿ ಆ ಚಿತ್ರಗಳಲ್ಲೂ ಯಶಸ್ಸು ಕಾಣುವ ವಿಶ್ವಾಸದಲ್ಲಿದ್ದಾರೆ.

ತೆಲುಗು ಟಿವಿ ಶೋಗಳಲ್ಲಿ ಮಿಂಚಿರುವ ಪೃಥ್ವಿಯವರನ್ನು ಅವರ ಸಾಧನೆ ಹಾಗು ಯಶಸ್ಸನ್ನು ಪರಿಗಣಿಸಿ ಬಿಗ್ ಬಾಸ್ ನ 8 ನೇ ಆವೃತ್ತಿಗೆ ಆಯ್ಕೆ ಮಾಡಲಾಗಿದೆ. ಓಟಿಂಗ್ ನಲ್ಲೂ ಮೂರನೇ ಸ್ಥಾನವನ್ನು ಕಾಯ್ದುಕೊಂಡಿರುವ ಪೃಥ್ವಿ ಬಿಗ್ ಬಾಸ್ ಆಗಿ ಹೊರಬರಲಿ ಎನ್ನುವ ಹಾರೈಕೆಗಳೂ ಕೇಳಿ ಬರಲಾರಂಭಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!