ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಟಿಪ್ಪರ್ ಚಾಲಕನ ನಿರ್ಲಕ್ಯಕ್ಕೆ ಹಲವು ವಾಹನಗಳು ಜಖಂ, ಯುವತಿ ಗಂಬೀರ

ಬೆಳ್ತಂಗಡಿ: ಅತಿವೇಗ ಹಾಗೂ ನಿರ್ಲಕ್ಯದ ಚಾಲನೆಯ ಹಿನ್ನಲೆ ಸರಣಿ ಅಪಾಘಾತ ನಡೆದಿದ್ದು ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಪ್ಪರ್ ಚಾಲಕನ ಅತಿವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್, ನಾಲ್ಕು ಕಾರು, ಒಂದು ಆಟೋ ರಿಕ್ಷಾ ಮತ್ತು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದೆ.
ಉಜಿರೆಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಎದುರಿನಿಂದ ಸಂಚರಿಸುತ್ತಿದ್ದ ಬಸ್ ಗೆ ಡಿಕ್ಕಿ
ಹೊಡೆದಿದೆ. ನಂತರ ಇನ್ನೊಂದು ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಎರಡನೆ ಬಾರಿ ಡಿಕ್ಕಿ ಹೊಡೆದ ರಭಸಕ್ಕೆ ಟಿಪ್ಪರ್ ಏಕಾಏಕಿ ಶೋರೂಂ ಕಡೆಗೆ ತಿರುಗಿ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಶೋರೂಂ ಎದುರು ನಿಲ್ಲಿಸಿದ್ದ ನಾಲ್ಕು ಕಾರು ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಬಳಂಜ ಗ್ರಾಮದ ಗುಂಡೇರಿ ನಿವಾಸಿಯಾದ ವೀಕ್ಷಾ (17) ಎಂದು ಗುರುತಿಸಲಾಗಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ವೀಕ್ಷಾ ತನ್ನ ಸ್ನೇಹಿತೆಯೊಂದಿಗೆ ಕಂಪ್ಯೂಟರ್‌ ತರಗತಿಗೆ ಹಾಜರಾಗಲು ನಡೆದುಕೊಂಡು ಹೋಗುತ್ತಿದ್ದಳು. ಮತ್ತೋರ್ವ ಬಾಲಕಿ ಟಿಪ್ಪರ್‌ನ ಚಕ್ರದಡಿ ಸಿಲುಕಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್ ಚಾಲಕ ಸುರೇಶ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!