ಜನ ಮನದ ನಾಡಿ ಮಿಡಿತ

Advertisement

ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲಿಸಲು ರಾಯಚೂರು SP ಗೆ ಸೂಚಿಸಿದ ಸಿಎಂ..!

ಕಲಬುರಗಿ: ಆಗಸ್ಟ್ 22 ರಂದು ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

 

ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು ಮತ್ತು ಸಂಪುಟ ಸದಸ್ಯರು ಬಸ್ ನಲ್ಲಿ ತೆರಳುವ ವೇಳೆ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಈ ವೇಳೆ ಕೊಲೆಯಾದ ಸಂಜಯ್ ಪತ್ನಿ ಶಾಂತಮ್ಮ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಶಾಂತಮ್ಮ ಅವರ ಗೋಳಾಟ ನೋಡಿ ಮರುಗಿದ ಸಿಎಂ, ಸ್ಥಳದಲ್ಲೇ ದೂರವಾಣಿ ಮೂಲಕ ರಾಯಚೂರು SP ಅವರನ್ನು ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ಕೇಳಿದರು.

ಬಳಿಕ ಕೊಲೆ ಪ್ರಕರಣದ ತನಿಖೆಯನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ಈ ವರೆಗೂ ನಡೆದಿರುವ ತನಿಖೆ ಸಮರ್ಪಕವಾಗಿದೆಯೇ? ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದು ಅವರು ತಪ್ಪಿಸಿಕೊಂಡಿದ್ದಾರಾ? ನಿಜವಾದ ಆರೋಪಿಗಳು ಹೊರಗೆ ಇದ್ದರೆ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ದೊರಕಲು ಸಾಧ್ಯವಿಲ್ಲ. ಆದ್ದರಿಂದ ಖುದ್ದಾಗಿ ಕೊಲೆ ಪ್ರಕರಣದ ತನಿಖೆಯ ಮೇಲೆ ನಿಗಾ ವಹಿಸಬೇಕು, ಬಳಿಕ ಈ ಬಗ್ಗೆ ನನಗೆ ವರದಿ ಮಾಡಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!