ಜನ ಮನದ ನಾಡಿ ಮಿಡಿತ

Advertisement

ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು….!!

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ.

ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.‌‌ಸೆ.16 ರಂದು ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.

 


ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ , ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,ರೂ. 24 ಸಾವಿರ ಮೌಲ್ಯದ ಅರ್ಧ ಪವನ್ ಚಿನ್ನದ ಉಂಗುರ ,ರೂ.12 ಸಾವಿರ ಮೌಲ್ಯದ 2 ಗ್ರಾಂ ತೂಕದ ಬ್ರಾಸ್ ಲೈಟ್ , ಹಾಗೂ 25 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಹರೀಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!