ಜನ ಮನದ ನಾಡಿ ಮಿಡಿತ

Advertisement

ಬಾಯಿಗೆ ಬಟ್ಟೆ ಕಟ್ಟಿ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಮೌನ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆಪಾದಿಸಿ ಇಂದು ಕೆಪಿಸಿಸಿ ಮೌನ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಲವು ಪ್ರಮುಖರು ಬಾಯಿಗೆ ಬಟ್ಟೆ ಕಟ್ಟಿ ಪ್ರತಿಭಟಿಸಿದರು. ವಿವಿಧ ಘೋಷಣೆಗಳುಳ್ಳ ಭಿತ್ತಿಚಿತ್ರಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು.
ರಾಹುಲ್ ಗಾಂಧಿಯವರ ಸತ್ಯದ ನುಡಿಗಳನ್ನು ಸಹಿಸದ ಪ್ರಧಾನಿಯವರು ಅವರ ವಿರುದ್ಧ ಸೇಡಿನ ಕ್ರಮ ಅನುಸರಿಸುತ್ತಿದ್ದಾರೆ. ರಾಹುಲ್ ಗಾಂಧಿಯವರ ರಾಜಕೀಯ ಜೀವನ ಕೊನೆಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಂತ್ರಿಗಳಾದ ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕದ ಪದಾಧಿಕಾರಿಗಳು ಭಾಗವಹಿಸಿ ಮೌನ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!