ಪ್ರಪಂಚದಾದ್ಯ0ತ ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ.

ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷದ್ ಅಗ್ರಹಿಸಿದ್ದಾರೆ.ಈ ವಿಚಾರವನ್ನು ಬೆಳಕಿಗೆ ತಂದಿರುವ ಹಾಗೂ ಬದಲಾವಣೆ ತಂದು ದೇವರಿಗೆ ಶುದ್ಧ ಲಾಡು ಅರ್ಪಿಸಲು ವ್ಯವಸ್ಥೆ ಮಾಡಿದ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ವಿಶ್ವ ಹಿಂದೂ ಪರಿಷದ್ ಸಲ್ಲಿಸಿದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ
ಶರಣ್ ಕುಮಾರ ಪಂಪವೆಲ್ ಹೇಳಿದ್ದಾರೆ.



