ಜನ ಮನದ ನಾಡಿ ಮಿಡಿತ

Advertisement

ಕಾರವಾರ: ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು…! 

ಕಾರವಾರ: ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು…!

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.

 

ಅಪರಿಚಿತರರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಾಕೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ದಾರೆ, ಕೊಲೆಯ ಹಿಂದಿನ ಮರ್ಮ ಇನ್ನಷ್ಟೇ ತಿಳಿಯಬೇಕಿದೆ. ಇನ್ನು ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!