ಜನ ಮನದ ನಾಡಿ ಮಿಡಿತ

Advertisement

ಜೈನಮುನಿ ಹತ್ಯೆ ಪ್ರಕರಣ; ಆರೋಪಿಗೆ ಕಾಡಿದ ಪಾಪಪ್ರಜ್ಞೆ!

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಹೀರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿಗೆ ಪಾಪಪ್ರಜ್ಞೆ ಕಾಡಿದ್ದು, “ನಂದು ತಪ್ಪಾಯ್ತು ನೀವೇ ನನ್ನ ಗುಂಡು ಹಾರಿಸಿ ಸಾಯಿಸಿ, ಇಲ್ಲ ನಾನೇ ಆತ್ಮಹತ್ಯೆ ಮಾಡಿಕೊಳ್ಳುವೆ” ಎಂದು ಹೇಳಿರುವುದಾಗಿ ವರದಿಗಳಾಗಿವೆ. ಪ್ರಕರಣದ ಪ್ರಮುಖ ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹಸನ್ ದಲಾಯತ್ ರನ್ನು ಪೊಲೀಸರು ಜು.17ರ ವರೆಗೆ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ನಾರಾಯಣ ಮಾಳಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದು, ಈ ರೀತಿ ನುಡಿದಿದ್ದಾನೆ ಎನ್ನಲಾಗಿದೆ. ಇಬ್ಬರು ಆರೋಪಿಗಳನ್ನೂ ಪೊಲೀಸರು ಪ್ರತ್ಯೇಕ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಜೈನ ಮುನಿಗಳ ಪರ್ಸನಲ್ ಡೈರಿಯನ್ನು ಸುಟ್ಟು ಹಾಕಿರುವುದಾಗಿಯೂ ಮಾಳಿ ಹೇಳಿದ್ದಾನೆ. ಆದರೆ, ಆ ಡೈರಿಯಲ್ಲಿ ಏನಿತ್ತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ.
ಈ ನಡುವೆ ನಾರಾಯಣ ಮಾಳಿ ಮನೆಗೆ ಪೊಲೀಸರು ಭಾರೀ ಭದ್ರತೆ ನೀಡಿದ್ದಾರೆ. 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕುಟುಂಬಸ್ಥ ರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಮನೆಯಲ್ಲಿರುವ 30ಕ್ಕೂ ಹೆಚ್ಚು ಜಾನುವಾರುಗಳಿಗೆ ಆರೈಕೆ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!