ಜನ ಮನದ ನಾಡಿ ಮಿಡಿತ

Advertisement

ಜೈನಮುನಿ ಹತ್ಯೆ ಪ್ರಕರಣ; ಆರೋಪಿಗೆ ಕಾಡಿದ ಪಾಪಪ್ರಜ್ಞೆ!

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಹೀರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿಗೆ ಪಾಪಪ್ರಜ್ಞೆ ಕಾಡಿದ್ದು, “ನಂದು ತಪ್ಪಾಯ್ತು ನೀವೇ ನನ್ನ ಗುಂಡು ಹಾರಿಸಿ ಸಾಯಿಸಿ, ಇಲ್ಲ ನಾನೇ ಆತ್ಮಹತ್ಯೆ ಮಾಡಿಕೊಳ್ಳುವೆ” ಎಂದು ಹೇಳಿರುವುದಾಗಿ ವರದಿಗಳಾಗಿವೆ. ಪ್ರಕರಣದ ಪ್ರಮುಖ ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹಸನ್ ದಲಾಯತ್ ರನ್ನು ಪೊಲೀಸರು ಜು.17ರ ವರೆಗೆ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ನಾರಾಯಣ ಮಾಳಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದು, ಈ ರೀತಿ ನುಡಿದಿದ್ದಾನೆ ಎನ್ನಲಾಗಿದೆ. ಇಬ್ಬರು ಆರೋಪಿಗಳನ್ನೂ ಪೊಲೀಸರು ಪ್ರತ್ಯೇಕ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಜೈನ ಮುನಿಗಳ ಪರ್ಸನಲ್ ಡೈರಿಯನ್ನು ಸುಟ್ಟು ಹಾಕಿರುವುದಾಗಿಯೂ ಮಾಳಿ ಹೇಳಿದ್ದಾನೆ. ಆದರೆ, ಆ ಡೈರಿಯಲ್ಲಿ ಏನಿತ್ತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ.
ಈ ನಡುವೆ ನಾರಾಯಣ ಮಾಳಿ ಮನೆಗೆ ಪೊಲೀಸರು ಭಾರೀ ಭದ್ರತೆ ನೀಡಿದ್ದಾರೆ. 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕುಟುಂಬಸ್ಥ ರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಮನೆಯಲ್ಲಿರುವ 30ಕ್ಕೂ ಹೆಚ್ಚು ಜಾನುವಾರುಗಳಿಗೆ ಆರೈಕೆ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!