ಮುಲ್ಕಿ: ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಪ್ರಾಮಾಣಿಕತೆ ಹಾಗೂ ಉತ್ತಮ ಕಾರ್ಯಧ್ಯಕ್ಷತೆಯಿಂದ ಸಮಾಜ ಸೇವೆ ಮಾಡಿದರೆ ಜನ ಗುರುತಿಸುತ್ತಾರೆ.ಜನಸೇವೆ ನಿರಂತರವಾಗಿ ನಡೆಯಲಿ ಎಂದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್,ಮುಂಬೈ ಕರ್ನಾಟಕ ಮಲ್ಲಪತ್ರಿಕೆಯ ಉಮೇಶ್ ಅಂಚನ್,ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ,ಮನೋಹರ ಕೋಟ್ಯಾನ್, ವಿಜಯ ಕುಮಾರ್ ಕುಬೆವೂರು,ಉದ್ಯಮಿ ಜೋನ್ ಕ್ವಾಡ್ರಾಸ್,ಹೊಸ ಅಂಗಣದ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ವಾಮನ್ ಕೋಟ್ಯಾನ್ ನಡಿಕುದ್ರು, ಬಂಕಿನಾಯಕರು, ರಮೇಶ್ ಅಮೀನ್ ಕೊಕ್ಕರಕಲ್, ರವಿಚಂದ್ರ ರಾವ್, ಎನ್. ರವಿ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಕೊಡುಗೈದಾನಿ ಸಮಾಜಸೇವಕ ಹಬೀಬುಲ್ಲ ರವರನ್ನು ಪತ್ನಿ ಶಮೀಮ ಜೊತೆ ಗೌರವಿಸಲಾಯಿತು.
ಹರಿಶ್ಚಂದ್ರ ಸಾಲ್ಯಾನ್ ಸ್ವಾಗತಿಸಿದರು, ದಿನೇಶ್ ಶೆಟ್ಟಿ, ಧನ್ಯವಾದ ಅರ್ಪಿಸಿದರು, ರವಿಚಂದ್ರ ನಿರೂಪಿಸಿದರು,



