ಜನ ಮನದ ನಾಡಿ ಮಿಡಿತ

Advertisement

ಬಿಗ್‌ ಬಾಸ್‌ ಸೀಸನ್‌ 11ಕ್ಕೆ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್‌ ಎಂಟ್ರಿ..!

ಟಿಕ್‌ಟಾಕ್ ಸ್ಟಾರ್, ಯುವ ಕಲಾವಿದ ಧನರಾಜ್ ಆಚಾರ್‌ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಧನರಾಜ್ ಅವರ ಹಾಸ್ಯಮಯ ಮತ್ತು ಸಾಮಾಜಿಕ ಕಳಕಳಿಯ ವಿಡಿಯೋಗಳು ಅಪಾರ ಜನಪ್ರಿಯತೆ ಗಳಿಸಿವೆ. ಮಗುವಿನ ಜನನದ ನಂತರ ಬಿಗ್ ಬಾಸ್ ಅವಕಾಶವನ್ನು ಪಡೆದಿರುವುದು ಅವರ ಅದೃಷ್ಟ ಎಂದು ಕುಟುಂಬ ಹೇಳಿಕೊಂಡಿದೆ.

ಕರಾವಳಿಯ ಯುವಕ, ಬಹುಮುಖ ಪ್ರತಿಭೆಯ ಕಲಾವಿದ, ಯುಟ್ಯೂಬರ್ 33 ವರ್ಷದ ಧನರಾಜ್ ಆಚಾರ್‌ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ‌ ಕಾಣಿಸಿಕೊಳ್ಳಲಿದ್ದಾರೆ.  ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ‌ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್‌ ಟಿಕ್‌ಟಾಕ್ ಸ್ಟಾರ್  ಎಂದೇ ಪ್ರಸಿದ್ಧಿ ಪಡೆದವರು.  ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ  ಪಡೆದಿದ್ದಾರೆ.  ಅಬ್ಬಬ್ಬಾ ಸಿನಿಮಾದ‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಗಮನಸೆಳೆದ ಧನರಾಜ್, ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿ ಇಡೀ ವೀಕ್ಷಕರ ಮನಗೆದ್ದವರು. ಮಾಮೇಶ್ವರ ರಾಘವ ಆಚಾರ್‌ ಹಾಗೂ ಸಂಧ್ಯಾ ದಂಪತಿಯ ಪುತ್ರನಾದ ಧನರಾಜ್, ವಿವಾಹದ ಬಳಿಕವೂ ಪತ್ನಿ‌ ಪ್ರಜ್ಞಾ ಆಚಾರ್‌ ಜೊತೆಗೂಡಿ ಅದೆಷ್ಟೋ ವಿಡಿಯೋಗಳ ಮೂಲಕ ಹೆಚ್ಚು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

ಪತ್ನಿ ಪ್ರಜ್ಞಾ ಆಚಾರ್ಯ ಗರ್ಭಿಣಿ ಯಾದಾಗ ಅಭಿಮಾನಿಗಳಿಗೆ ವಿಶೇಷ ವಿಡಿಯೋ ಮೂಲಕವೇ ಸಿಹಿಸುದ್ದಿ ನೀಡಿದ ಧನರಾಜ್ , ಕಳೆದ ಆಗಸ್ಟ್ 21 ಕ್ಕೆ ಹೆಣ್ಣುಮಗುವಿನ ತಂದೆಯಾಗಿದ್ದಾರೆ. ತನ್ನ ಅಜ್ಜಿ ಕಮಲಜ್ಜಿ ಯ ಜೊತೆಗೆ ತಮ್ಮ‌ಇಡೀ ಫ್ಯಾಮಿಲಿಯನ್ನು ಜಾಗೃತಿ ವಿಡಿಯೋಗಳಿಗೆ ಬಳಸಿ ಇವರ ಕುಟುಂಬ  ಕಮಲಜ್ಜಿ ಫ್ಯಾಮಿಲಿ ಎನ್ನಿಸಿಕೊಂಡಿತ್ತು.  ಈ ಎಲ್ಲದರ ನಡುವೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವ ಕಾರಣಕ್ಕೆ ಧನರಾಜ್ ತನ್ನ ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದಾರೆ.  ಕರಾವಳಿಯ ಯುವಕ, ಬಹುಮುಖ ಪ್ರತಿಭೆಯ ಕಲಾವಿದ, ಯುಟ್ಯೂಬರ್ 33 ವರ್ಷದ ಧನರಾಜ್ ಆಚಾರ್‌ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ‌ ಕಾಣಿಸಿಕೊಳ್ಳಲಿದ್ದಾರೆ.  ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ‌ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್‌ ಟಿಕ್‌ಟಾಕ್ ಸ್ಟಾರ್  ಎಂದೇ ಪ್ರಸಿದ್ಧಿ ಪಡೆದವರು.  ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ  ಪಡೆದಿದ್ದಾರೆ.  ಅಬ್ಬಬ್ಬಾ ಸಿನಿಮಾದ‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಗಮನಸೆಳೆದ ಧನರಾಜ್, ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿ ಇಡೀ ವೀಕ್ಷಕರ ಮನಗೆದ್ದವರು. ಮಾಮೇಶ್ವರ ರಾಘವ ಆಚಾರ್‌ ಹಾಗೂ ಸಂಧ್ಯಾ ದಂಪತಿಯ ಪುತ್ರನಾದ ಧನರಾಜ್, ವಿವಾಹದ ಬಳಿಕವೂ ಪತ್ನಿ‌ ಪ್ರಜ್ಞಾ ಆಚಾರ್‌ ಜೊತೆಗೂಡಿ ಅದೆಷ್ಟೋ ವಿಡಿಯೋಗಳ ಮೂಲಕ ಹೆಚ್ಚು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.ಪತ್ನಿ ಪ್ರಜ್ಞಾ ಆಚಾರ್ಯ ಗರ್ಭಿಣಿ ಯಾದಾಗ ಅಭಿಮಾನಿಗಳಿಗೆ ವಿಶೇಷ ವಿಡಿಯೋ ಮೂಲಕವೇ ಸಿಹಿಸುದ್ದಿ ನೀಡಿದ ಧನರಾಜ್ , ಕಳೆದ ಆಗಸ್ಟ್ 21 ಕ್ಕೆ ಹೆಣ್ಣುಮಗುವಿನ ತಂದೆಯಾಗಿದ್ದಾರೆ. ತನ್ನ ಅಜ್ಜಿ ಕಮಲಜ್ಜಿ ಯ ಜೊತೆಗೆ ತಮ್ಮ‌ಇಡೀ ಫ್ಯಾಮಿಲಿಯನ್ನು ಜಾಗೃತಿ ವಿಡಿಯೋಗಳಿಗೆ ಬಳಸಿ ಇವರ ಕುಟುಂಬ  ಕಮಲಜ್ಜಿ ಫ್ಯಾಮಿಲಿ ಎನ್ನಿಸಿಕೊಂಡಿತ್ತು.  ಈ ಎಲ್ಲದರ ನಡುವೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವ ಕಾರಣಕ್ಕೆ ಧನರಾಜ್ ತನ್ನ ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!