ಜನ ಮನದ ನಾಡಿ ಮಿಡಿತ

Advertisement

ಬಿಗ್‌ ಬಾಸ್‌ ಸೀಸನ್‌ 11ಕ್ಕೆ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್‌ ಎಂಟ್ರಿ..!

ಟಿಕ್‌ಟಾಕ್ ಸ್ಟಾರ್, ಯುವ ಕಲಾವಿದ ಧನರಾಜ್ ಆಚಾರ್‌ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಧನರಾಜ್ ಅವರ ಹಾಸ್ಯಮಯ ಮತ್ತು ಸಾಮಾಜಿಕ ಕಳಕಳಿಯ ವಿಡಿಯೋಗಳು ಅಪಾರ ಜನಪ್ರಿಯತೆ ಗಳಿಸಿವೆ. ಮಗುವಿನ ಜನನದ ನಂತರ ಬಿಗ್ ಬಾಸ್ ಅವಕಾಶವನ್ನು ಪಡೆದಿರುವುದು ಅವರ ಅದೃಷ್ಟ ಎಂದು ಕುಟುಂಬ ಹೇಳಿಕೊಂಡಿದೆ.

ಕರಾವಳಿಯ ಯುವಕ, ಬಹುಮುಖ ಪ್ರತಿಭೆಯ ಕಲಾವಿದ, ಯುಟ್ಯೂಬರ್ 33 ವರ್ಷದ ಧನರಾಜ್ ಆಚಾರ್‌ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ‌ ಕಾಣಿಸಿಕೊಳ್ಳಲಿದ್ದಾರೆ.  ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ‌ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್‌ ಟಿಕ್‌ಟಾಕ್ ಸ್ಟಾರ್  ಎಂದೇ ಪ್ರಸಿದ್ಧಿ ಪಡೆದವರು.  ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ  ಪಡೆದಿದ್ದಾರೆ.  ಅಬ್ಬಬ್ಬಾ ಸಿನಿಮಾದ‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಗಮನಸೆಳೆದ ಧನರಾಜ್, ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿ ಇಡೀ ವೀಕ್ಷಕರ ಮನಗೆದ್ದವರು. ಮಾಮೇಶ್ವರ ರಾಘವ ಆಚಾರ್‌ ಹಾಗೂ ಸಂಧ್ಯಾ ದಂಪತಿಯ ಪುತ್ರನಾದ ಧನರಾಜ್, ವಿವಾಹದ ಬಳಿಕವೂ ಪತ್ನಿ‌ ಪ್ರಜ್ಞಾ ಆಚಾರ್‌ ಜೊತೆಗೂಡಿ ಅದೆಷ್ಟೋ ವಿಡಿಯೋಗಳ ಮೂಲಕ ಹೆಚ್ಚು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

ಪತ್ನಿ ಪ್ರಜ್ಞಾ ಆಚಾರ್ಯ ಗರ್ಭಿಣಿ ಯಾದಾಗ ಅಭಿಮಾನಿಗಳಿಗೆ ವಿಶೇಷ ವಿಡಿಯೋ ಮೂಲಕವೇ ಸಿಹಿಸುದ್ದಿ ನೀಡಿದ ಧನರಾಜ್ , ಕಳೆದ ಆಗಸ್ಟ್ 21 ಕ್ಕೆ ಹೆಣ್ಣುಮಗುವಿನ ತಂದೆಯಾಗಿದ್ದಾರೆ. ತನ್ನ ಅಜ್ಜಿ ಕಮಲಜ್ಜಿ ಯ ಜೊತೆಗೆ ತಮ್ಮ‌ಇಡೀ ಫ್ಯಾಮಿಲಿಯನ್ನು ಜಾಗೃತಿ ವಿಡಿಯೋಗಳಿಗೆ ಬಳಸಿ ಇವರ ಕುಟುಂಬ  ಕಮಲಜ್ಜಿ ಫ್ಯಾಮಿಲಿ ಎನ್ನಿಸಿಕೊಂಡಿತ್ತು.  ಈ ಎಲ್ಲದರ ನಡುವೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವ ಕಾರಣಕ್ಕೆ ಧನರಾಜ್ ತನ್ನ ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದಾರೆ.  ಕರಾವಳಿಯ ಯುವಕ, ಬಹುಮುಖ ಪ್ರತಿಭೆಯ ಕಲಾವಿದ, ಯುಟ್ಯೂಬರ್ 33 ವರ್ಷದ ಧನರಾಜ್ ಆಚಾರ್‌ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ‌ ಕಾಣಿಸಿಕೊಳ್ಳಲಿದ್ದಾರೆ.  ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ‌ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್‌ ಟಿಕ್‌ಟಾಕ್ ಸ್ಟಾರ್  ಎಂದೇ ಪ್ರಸಿದ್ಧಿ ಪಡೆದವರು.  ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ  ಪಡೆದಿದ್ದಾರೆ.  ಅಬ್ಬಬ್ಬಾ ಸಿನಿಮಾದ‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಗಮನಸೆಳೆದ ಧನರಾಜ್, ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿ ಇಡೀ ವೀಕ್ಷಕರ ಮನಗೆದ್ದವರು. ಮಾಮೇಶ್ವರ ರಾಘವ ಆಚಾರ್‌ ಹಾಗೂ ಸಂಧ್ಯಾ ದಂಪತಿಯ ಪುತ್ರನಾದ ಧನರಾಜ್, ವಿವಾಹದ ಬಳಿಕವೂ ಪತ್ನಿ‌ ಪ್ರಜ್ಞಾ ಆಚಾರ್‌ ಜೊತೆಗೂಡಿ ಅದೆಷ್ಟೋ ವಿಡಿಯೋಗಳ ಮೂಲಕ ಹೆಚ್ಚು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.ಪತ್ನಿ ಪ್ರಜ್ಞಾ ಆಚಾರ್ಯ ಗರ್ಭಿಣಿ ಯಾದಾಗ ಅಭಿಮಾನಿಗಳಿಗೆ ವಿಶೇಷ ವಿಡಿಯೋ ಮೂಲಕವೇ ಸಿಹಿಸುದ್ದಿ ನೀಡಿದ ಧನರಾಜ್ , ಕಳೆದ ಆಗಸ್ಟ್ 21 ಕ್ಕೆ ಹೆಣ್ಣುಮಗುವಿನ ತಂದೆಯಾಗಿದ್ದಾರೆ. ತನ್ನ ಅಜ್ಜಿ ಕಮಲಜ್ಜಿ ಯ ಜೊತೆಗೆ ತಮ್ಮ‌ಇಡೀ ಫ್ಯಾಮಿಲಿಯನ್ನು ಜಾಗೃತಿ ವಿಡಿಯೋಗಳಿಗೆ ಬಳಸಿ ಇವರ ಕುಟುಂಬ  ಕಮಲಜ್ಜಿ ಫ್ಯಾಮಿಲಿ ಎನ್ನಿಸಿಕೊಂಡಿತ್ತು.  ಈ ಎಲ್ಲದರ ನಡುವೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವ ಕಾರಣಕ್ಕೆ ಧನರಾಜ್ ತನ್ನ ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!