ಜನ ಮನದ ನಾಡಿ ಮಿಡಿತ

Advertisement

ಮುಡಾ ಹಗರಣ ಕೇಸ್: ಸಿದ್ದರಾಮಯ್ಯಗೆ ಶುರುವಾಯ್ತು ಇಡಿ ಸಂಕಷ್ಟ!

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್​ ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ. ಇದರ ಮಧ್ಯ ಇದೀಗ ಸಿದ್ದರಾಮಯ್ಯಗೆ ಜಾರಿ ನಿರ್ದೇಶನಾಲಯ (ಇಡಿ) ಸಂಕಷ್ಟ ಎದುರಾಗಿದೆ.

 ಇಂದು (ಸೆಪ್ಟೆಂಬರ್ 30) ಬೆಂಗಳೂರಿನ ಇಡಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಸಿಎಂ ವಿರುದ್ಧ ಯಾವುದೇ ಸಂದರ್ಭದಲ್ಲಿ ಎಫ್​ಐಆರ್​ ದಾಖಲಾಗುವ ಸಾಧ್ಯತೆ ಇದೆ. ಒಂದು ವೇಳೆ ಇಡಿಯಲ್ಲೂ ಎಫ್​ಐಆರ್ ದಾಖಲಾದರೆ, ಸಿದ್ದರಾಮಯ್ಯಗೆ ಡಬಲ್​ ಸಂಕಷ್ಟ ಎದುರಾದಂತಾಗುತ್ತದೆ.

ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಂದು ತಮ್ಮವರ ಮೂಲಕ ಇಡಿ ಕಚೇರಿಗೆ ದೂರು ತಲುಪಿಸಿದ್ದು, ಇದೀಗ ಇಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡು ಸ್ವೀಕೃತಿ ಪತ್ರ ಸಹ ನೀಡಿದ್ದಾರೆ. ಹೀಗಾಗಿ ಯಾವುದೇ ಸಮಯದಲ್ಲೂ ಸಹ ಸಿಎಂ ವಿರುದ್ಧ ಇಡಿ ಅಧಿಕಾರಿಗಳು ಎಫ್​ಐಆರ್ ದಾಖಲಿಸಲಿದ್ದಾರೆ.

ಲೋಕಾಯುಕ್ತ ತನಿಖೆ ಜೊತೆಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಡಬಲ್ ಟೆನ್ಷನ್ ಶುರುವಾಗಿದೆ. ಒಂದ್ಕಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಯುವ ಸಂಸ್ಥೆಯಾಗಿದೆ. ಹೀಗಾಗಿ ಪಾರದರ್ಶಕ ತನಿಖೆಯಾಗ್ಬೇಕು ಅಂದ್ರೆ ಸಿಬಿಐಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇದೀಗ ಇಡಿ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!