ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಆಯ್ಕೆ

ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಅವರನ್ನು ಘೋಷಣೆ ಮಾಡಲಾಗಿದೆ.

 


ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.ಅತೀ ಕಡಿಮೆ ಜನಸಂಖ್ಯೆ ಇರುವ ಭಂಡಾರಿ ಸಮುದಾಯವನ್ನು ಗುರುತಿಸಿ ಈ ಬಾರಿ ಬಿಜೆಪಿ ಟಿಕೆಟ್ ‌ನೀಡುವ ಮೂಲಕ ಕೆಲ ಸಮುದಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಪ್ರಸ್ತುತ ದಿನಗಳಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿ ಜಾತಿಗಳನ್ನು ನೋಡಿಕೊಂಡು ದೊಡ್ಡ ಸಮುದಾಯಗಳಿಗೆ ಮಣೆ ಹಾಕುತ್ತಿದೆಎಂಬ ಆರೋಪ ಕೇಳಿ ಬರುತ್ತಿತ್ತು.ಆದರೆ ಪ್ರಸ್ತುತ ಬಿಜೆಪಿ ಯ ಈ ಅಚ್ಚರಿ ಯ ಆಯ್ಕೆಯಿಂದ ಅಂತಹದೊಂದು ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ.
ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಪ್ರಬಲ ಸಮುದಾಯಗಳಾದ ಬಂಟ ಸಮಾಜದ ನಳಿನ್ ಕುಮಾರ್ ಕಟೀಲು ಹಾಗೂ ಮೊಗವೀರ ಸಮಾಜದ ಪ್ರಮೋದ್ ಮದ್ವರಾಜ್ , ಬಿಲ್ಲವ ಸಮುದಾಯದ ಸತೀಶ್ ಸುವರ್ಣ ಹಾಗೂ ಗೀತಾಂಜಲಿ ಸುವರ್ಣ ಅವರ ಹೆಸರುಗಳು ಕೇಳಿ ಬಂದಿತ್ತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!