ಜನ ಮನದ ನಾಡಿ ಮಿಡಿತ

Advertisement

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ನಗರದ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ ಬೆಳಗ್ಗೆ 09:15ರಿಂದ 09.45ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ನಾಡೋಜ, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ನವರಾತ್ರಿ ಉತ್ಸವವನ್ನು ಉದ್ಘಾಟಿಸಿದರು.


ಇದಕ್ಕೂ ಮೊದಲು ದಟ್ಟ ಮಂಜು ಕವಿದ ವಾತಾವರಣದಲ್ಲಿ ನಾಡೋಜ ಹಂ.ಪ.ನಾಗರಾಜಯ್ಯರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಡೊಳ್ಳು, ವಾದ್ಯ ಸೇರಿದಂತೆ ಕಲಾ ಮೇಳಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಹಂ.ಪ.ನಾ ಬುಧವಾರ ರಾತ್ರಿಯೇ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಅವರನ್ನು ಗುರುವಾರ ಬೆಳಗ್ಗೆ ಪೊಲೀಸ್ ಬೆಂಗಾವಲಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ಮೈಸೂರಿನಿಂದ ಕೆಎಸ್ಸಾರ್ಟಿಸಿ ಐರಾವತ ಬಸ್ ನಲ್ಲಿ ಆಗಮಿಸಿದರು. ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ತಂಡಕ್ಕೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ನಂತರ ನಾಡೋಜ ಹಂ.ಪ.ನಾಗರಾಜಯ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಶ್ರೀಚಾಮುಂಡೇಶ್ವರಿ ದರ್ಶನ ಪಡೆದರು. ದೇವಾಲಯದ ವತಿಯಿಂದ ಹಂ.ಪ.ನಾಗರಾಜಯ್ಯ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲರಿಗೂ ಶಾಲು ಹಾರ, ಕುಂಕುಮ ಹಾಕಿ ಫಲ ತಾಂಬೂಲ ನೀಡಲಾಯಿತು.

 

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!