ಜನ ಮನದ ನಾಡಿ ಮಿಡಿತ

Advertisement

ನನ್ನ ತಂದೆಯೇ ನನ್ನ ನೆಚ್ಚಿನ ಗುರು

ಪ್ರಥಮಥ  ಗುರುವಿಗೆ  ವಂದಿಸುತ್ತ ನನ್ನ ನೆಚ್ಚಿನ ಶಿಕ್ಷಕರ ಬಗ್ಗೆ ಒಂದೆರಡು ಅನಿಸಿಕೆಗಳನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ. 

“ಮನೆಯೇ ಮೊದಲ ಪಾಠಶಾಲೆ ಜನನಿ ತಾನೇ ಮೊದಲ ಗುರು” ಎಂಬ  ನಾಣ್ನುಡಿಯಂತೆ  ನನಗೆ ಮನೆಯೇ ಮೊದಲ ಪಾಠಶಾಲೆಯಾಗಿದೆ .ಅಂತೆಯೇ ನನ್ನ ನೆಚ್ಚಿನ ಶಿಕ್ಷಕ ನನ್ನ ತಂದೆಯೇ ಆಗಿದ್ದಾರೆ. ಸಣ್ಣ ವಯಸ್ಸಿನಿಂದಲೂ ತಂದೆಯ ಶಿಸ್ತು ,ಸಂಯಮ, ಸಮಯ ಪಾಲನೆ ಮುಂತಾದ ಗುಣಗಳು ನನ್ನ ಮೇಲೆ ಪ್ರಭಾವ ಬೀರಿದೆ. ಅವರು ಶಾಲೆಯಲ್ಲಿ ನನ್ನ ಶಿಕ್ಷಕರು ಕೂಡ ಹೌದು. ನನ್ನ  ಶಾಲೆಯ ಹೆಸರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ,ನಾಗೂರು  ನನ್ನ ತಂದೆ ಇಲ್ಲಿ  ಕನ್ನಡ  ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನನ್ನಲ್ಲಿ ಸಣ್ಣ ವಯಸ್ಸಿನಿಂದಲೇ ಕನ್ನಡಾಭಿಮಾನವನ್ನು ಮೂಡಿಸಿದವರು ನನ್ನ ತಂದೆಯೇ ಆಗಿದ್ದಾರೆ.  ನಾನು ಮೂರು ವರ್ಷದವಳಿರುವಾಗಲೇ ಕನ್ನಡವನ್ನು  ಓದುವುದರ ಜೊತೆಗೆ ಸ್ಪಷ್ಟವಾಗಿ  ಬರೆಯುತ್ತಿದ್ದೆ. ಎಲ್ಲರೂ ಇದಕ್ಕೆ ಅಚ್ಚರಿಪಡುತ್ತಿದ್ದರು. ಇದಕ್ಕೆ ಕಾರಣ ನಾನು ದಿನವೂ ನನ್ನ ತಂದೆ ಮನೆಯಲ್ಲಿ.     ಪಾಠಕ್ಕೆ  ಅಣಿ ಯಾಗುವುದನ್ನು ನೋಡುತ್ತಿದ್ದೆ. ನನ್ನ ತಂದೆ ಉತ್ತಮ ಕಲಾವಿದರು ಹೌದು. ಅವರಿಂದ ನಾನು ನಾಟಕ ಅಭಿನಯ, ಕಾವ್ಯವಾಚನ ಮುಂತಾದ ಕಲೆಗಳನ್ನು ಕೂಡ ಕಲಿತಿದ್ದೇನೆ . “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ದಾಸವಾಣಿಯಂತೆ ಗುರುವಿಗೆ, ಗುರುವಿನ  ಸ್ಥಾನದಲ್ಲಿರುವರಿಗೆ ನಾವು ಗೌರವವನ್ನು ನೀಡಬೇಕು. ನನ್ನ ತಂದೆ ಇವೆಲ್ಲ ಗುಣಗಳನ್ನು ನನಗೆ ಕಲಿಸಿ ಕೊಟ್ಟಿದ್ದಾರೆ. ನನ್ನ ತಂದೆಯಾಗಿ, ಗುರು ಆಗಿ  ನನಗೆ ಸರಿ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡಿದ್ದಾರೆ.

 

ಶ್ರೇಯಾ. ಆರ್ ನಾಯ್ಕ

10ನೇ ತರಗತಿ ಸಂದೀಪನ ಆಂಗ್ಲ ಮಾಧ್ಯಮ ಶಾಲೆ,ನಾಗೂರು
ಉಡುಪಿ ಜಿಲ್ಲೆ

 

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!