ಜನ ಮನದ ನಾಡಿ ಮಿಡಿತ

Advertisement

ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್- 2024

  • ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್- 2024
  • ಜೂಯಿಸ್ ಫಿಟ್ನೆಸ್ ಕ್ಲಬ್ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಆಯೋಜನೆ

ಮಂಗಳೂರು: ಬೆಳಗ್ಗೆ ಸುಮಾರು ಐದು ಗಂಟೆಯ ವೇಳೆ ಚುಮು ಚುಮು ಚಳಿಯ ಮಧ್ಯೆಯೂ ಕುದ್ರೋಳಿ ಕ್ಷೇತ್ರದ ಪರಿಸರದಲ್ಲಿ ಸೇರಿದ ಸಹಸ್ರಾರು ಮಂದಿಯಲ್ಲಿ ಬತ್ತದ ಉತ್ಸಾಹ.. ಗೆಲುವಿನ ಖುಷಿ…


ಇಂತಹ ಅದ್ಭುತ ಸನ್ನಿವೇಶಕ್ಕೆ ಕಾರಣವಾಗಿದ್ದು, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ-2024ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ನಡೆದ ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್-2024 ಸ್ಪರ್ಧೆ…
‘ವನ್ ಸಿಟಿ ವನ್ ಸ್ಪಿರಿಟ್’ ಧ್ಯೇಯದೊಂದಿಗೆ ದಕ್ಷಿಣಕನ್ನಡ ಜಿಲ್ಲೆಯನ್ನು ವ್ಯಸನಮುಕ್ತವಾಗಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಚಿಣ್ಣರಿಂದ ವೃದ್ಧರವರೆಗೂ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ಮೂಲಕ ವಿಶೇಷ ಮೆರಗು ನೀಡಿದರು. ಕೇರಳ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. ಧಾರ್ಮಿಕ ಕ್ಷೇತ್ರದಿಂದ ಇಂತಹ ಸಮಾಜಮುಖಿ ಧ್ಯೇಯದೊಂದಿಗೆ ಮ್ಯಾರಾಥಾನ್ ಆಯೋಜಿಸಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. 21 ಕಿ.ಮೀ, 10 ಕಿ.ಮೀ ಸ್ಪರ್ಧೆ ಮತ್ತು 5 ಕಿ.ಮೀಟರ್ ಫನ್ ರನ್ ನಡೆಯಿತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಯಿತು. 21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ. ಹಾಗೂ ತೃತೀಯ 10 ಸಾವಿರ ರೂ., 10 ಕಿ.ಮೀ. ಹಾಫ್ ಮ್ಯಾರಥಾನ್‌ಗೆ ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ. ಹಾಗೂ ತೃತೀಯ 5 ಸಾವಿರ ರೂ. ಬಹುಮಾನ ನೀಡಲಾಯಿತು.

ಉದ್ಘಾಟನೆ: ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕುದ್ರೋಳಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿ ಸಂತೋಷ್ ಜೆ.ಪೂಜಾರಿ, ಕುದ್ರೋಳಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ದ.ಕ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿಸೋಜ, ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಅನಿಲ್ ಲೋಬೋ, ಜೂಯಿಸ್ ಫಿಟ್ನೆಸ್ ಕ್ಲಬ್‌ನ ರಾಜೇಶ್ ಪಾಟಾಲಿ, ಕಬಡ್ಡಿಪಟು ರವಿ ಉರ್ವ, ಗೋಕರ್ಣನಾಥ ಸೇವಾದಳ ಸದಸ್ಯರು ಮೊದಲಾದವರು ಇದ್ದರು. ಆರ್.ಜೆ ಅನುರಾಗ್ ಕಾರ್ಯಕ್ರಮ ನಿರೂಪಿಸಿದರು.

ಬಹುಮಾನ ವಿಜೇತರು
10ಕೆ ಪುರುಷರ ವಿಭಾಗ
ಪ್ರಥಮ: ಮಂಗಳೂರಿನ ರಂಗಣ್ಣ ನಾಯ್ಕರ (33 ನಿಮಿಷ 53ಸೆಕೆಂಡ್),
ದ್ವಿತೀಯ: ಬೆಂಗಳೂರಿನ ಶ್ರೀಧರ ಎಸ್.ಎನ್(33.55)
ತೃತೀಯ: ಬೆಂಗಳೂರಿನ ಗೋವಿಂದರಾಜ ಎಚ್. (35.15)

10ಕೆ ಮಹಿಳಾ ವಿಭಾಗ
ಪ್ರಥಮ: ಬೆಂಗಳೂರಿನ ಸ್ಮಿತಾ ಡಿ.ಆರ್.(41.09)
ದ್ವಿತೀಯ: ಮೈಸೂರಿನ ಉಷಾ ಆರ್. (42.01)
ತೃತೀಯ: ಮೈಸೂರಿನ ಪ್ರೀಯಾಂಕಾ ಮಾರುತಿ(44.48)

22ಕೆ ಪುರುಷರ ವಿಭಾಗ
ಪ್ರಥಮ: ಬೆಳಗಾಂನ ಶಿವಾನಂದ ಚಿಗರಿ (1ಗಂಟೆ 12ನಿಮಿಷ 07 ಸೆಕೆಂಡ್)
ದ್ವಿತೀಯ: ಹಾವೇರಿಯ ಪುರುಷೋತ್ತಮ ಆರ್. (1.13.28),
ತೃತೀಯ: ಮೈಸೂರಿನ ಸಚಿನ್ ನಂದು (1.14.13)

22ಕೆ ಮಹಿಳಾ ವಿಭಾಗ
ಪ್ರಥಮ: ಕೇರಳದ ಆಶಾ ಟಿ.ಪಿ (1.30.20)
ದ್ವಿತೀಯ: ಬೆಂಗಳೂರಿನ ಪ್ರಿಯಾಂಕಾ ಸಿ (1.35.18)
ತೃತೀಯ: ಮೈಸೂರಿನ ಅರ್ಚನಾ ಕೆ. ಎಂ(1.36.14)

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!